ಸಾಂದರ್ಭಿಕ ಚಿತ್ರ 
ದೇಶ

ಪಾಸಿಟಿವಿಟಿ ಪ್ರಮಾಣ, ದೈನಂದಿನ, ಸಕ್ರಿಯ ಪ್ರಕರಣಗಳ ಇಳಿಕೆಯೊಂದಿಗೆ ಕೋವಿಡ್-19 ಪರಿಸ್ಥಿತಿ ಸ್ಥಿರ: ಕೇಂದ್ರ ಸರ್ಕಾರ

ಮೇ 10 ರಂದು ಶೇ. 24.83 ರಷ್ಟಿದ್ದ ಕೋವಿಡ್-19 ಪಾಸಿಟಿವಿಟಿ ದರ ಮೇ 22 ರಂದು ಶೇ.12.45ಕ್ಕೆ ಕುಸಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ನವದೆಹಲಿ: ಮೇ 10 ರಂದು ಶೇ.24.83 ರಷ್ಟಿದ್ದ ಕೋವಿಡ್-19 ಪಾಸಿಟಿವಿಟಿ ದರ ಮೇ 22 ರಂದು ಶೇ.12.45ಕ್ಕೆ ಕುಸಿತ ಕಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ನೀತಿ ಆಯೋಗ ಸದಸ್ಯ (ಆರೋಗ್ಯ) ವಿಕೆ ಪೌಲ್, ಒಟ್ಟಾರೇ, ಪ್ರಕರಣಗಳ ಸಂಖ್ಯೆಯಲ್ಲಿ
ಕುಸಿತ ಕಂಡಿದ್ದರೂ 382 ಜಿಲ್ಲೆಗಳಲ್ಲಿ  ಪಾಸಿಟಿವಿಟಿ ದರ ಈಗಲೂ ಶೇ.10 ರಷ್ಟಿದೆ. ಪಾಸಿಟಿವಿಟಿ ಪ್ರಮಾಣ, ದೈನಂದಿನ ಮತ್ತು ಸಕ್ರಿಯ ಪ್ರಕರಣಗಳ ಇಳಿಕೆಯೊಂದಿಗೆ ಕೋವಿಡ್-19 ಪರಿಸ್ಥಿತಿ ಸ್ಥಿರವಾಗಿದೆ ಎಂದರು.

ಎಂಟು ರಾಜ್ಯಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದರೆ, 18 ಜಿಲ್ಲೆಗಳಲ್ಲಿ ಶೇ.15 ರಷ್ಟು ಪಾಸಿಟಿವಿ ದರವಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅರ್ಗಾವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾರ್ಚ್ 1 ರಲ್ಲಿ ಶೇ.8 ರಷ್ಟಿದ್ದ  ಕೋವಿಶೀಲ್ಡ್ ಲಸಿಕೆ ವ್ಯರ್ಥ ಈಗ  ಶೇ.1ಕ್ಕೆ ಇಳಿದಿದೆ. ಇದೇ ಅವಧಿಯಲ್ಲಿ ಕೋವಾಕ್ಸಿನ್ ಲಸಿಕೆ ವ್ಯರ್ಥ ಶೇ.17ರಿಂದ ಶೇ.4ಕ್ಕೆ  ಕಡಿಮೆಯಾಗಿದೆ. ಮಕ್ಕಳಲ್ಲಿಯೂ ಕೊರೋನಾವೈರಸ್ ಸೋಂಕು ಹರಡಬಹುದು ಆದರೆ, ಬಹುತೇಕವಾಗಿ ಲಘು ಸೋಂಕು ಕಾಣಿಸಿಕೊಳ್ಳಲಿದ್ದು, ಮರಣ ಪ್ರಮಾಣ ಕಡಿಮೆ ಇರಲಿದೆ ಎಂದು ಪೌಲ್ ಹೇಳಿದರು.

ಒಂದೇ ದಿನ 2.57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಸತತ ಆರನೇ ದಿನವೂ ದೇಶದಲ್ಲಿ ಕೋವಿಡ್-19 ಪ್ರಕರಣಗಳ ದೈನಂದಿನ ಏರಿಕೆಯಲ್ಲಿ ಮೂರು ಲಕ್ಷಕ್ಕಿಂತ ಕಡಿಮೆಯಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

2.57 ಲಕ್ಷ ಹೊಸ ಪ್ರಕರಣ ಪತ್ತೆಯೊಂದಿಗೆ ದೇಶದಲ್ಲಿ ಒಟ್ಟಾರೇ ಪ್ರಕರಣಗಳ ಸಂಖ್ಯೆ 2.62,89,290ಕ್ಕೆ ಏರಿಕೆಯಾಗಿದೆ. 4,194 ಮಂದಿ ಸೋಂಕಿತರು ಮೃತಪಡುತ್ತಿರುವುದಾಗಿ ಒಟ್ಟಾರೇ ಸಾವಿನ ಸಂಖ್ಯೆ 2,95,525ಕ್ಕೆ ಏರಿಕೆಯಾಗಿದೆ. ಒಟ್ಟಾರೇ ಸೋಂಕಿತರಲ್ಲಿ ಶೇ.11.12 ರಷ್ಟು 29,23,400 ಸಕ್ರಿಯ ಪ್ರಕರಣಗಳು ಇಳಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.87.76 ರಷ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT