ಸಾಂದರ್ಭಿಕ ಚಿತ್ರ 
ದೇಶ

'ಭಾರತದ ರೂಪಾಂತರಿ' ಎಂಬ ಉಲ್ಲೇಖದ ಕೊರೋನಾ ವಿಷಯಗಳನ್ನು ತಕ್ಷಣವೇ ತೆಗೆದುಹಾಕಿ: ಸೋಷಿಯಲ್ ಮೀಡಿಯಾಗಳಿಗೆ ಕೇಂದ್ರ ಸೂಚನೆ

ಕೊರೋನಾ ವೈರಸ್ ನ ಭಾರತ ರೂಪಾಂತರಿ ಎಂಬ ಉಲ್ಲೇಖದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿರುವ ವಿಷಯಗಳನ್ನು ಕೂಡಲೇ ತೆಗೆಯುವಂತೆ ಕೇಂದ್ರ ಸರ್ಕಾರ ಸೋಷಿಯಲ್ ಮೀಡಿಯಾ ಕಂಪೆನಿಗಳನ್ನು ಕೇಳಿಕೊಂಡಿದೆ. ಕೋವಿಡ್-19 ಬಗ್ಗೆ ತಪ್ಪು ಮಾಹಿತಿ ಹಬ್ಬುತ್ತಿದ್ದು ಇದನ್ನು ತಡೆಯಬೇಕೆಂದು ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ: ಕೊರೋನಾ ವೈರಸ್ ನ ಭಾರತ ರೂಪಾಂತರಿ ಎಂಬ ಉಲ್ಲೇಖದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿರುವ ವಿಷಯಗಳನ್ನು ಕೂಡಲೇ ತೆಗೆಯುವಂತೆ ಕೇಂದ್ರ ಸರ್ಕಾರ ಸೋಷಿಯಲ್ ಮೀಡಿಯಾ ಕಂಪೆನಿಗಳನ್ನು ಕೇಳಿಕೊಂಡಿದೆ.ಕೋವಿಡ್-19 ಬಗ್ಗೆ ತಪ್ಪು ಮಾಹಿತಿ ಹಬ್ಬುತ್ತಿದ್ದು ಇದನ್ನು ತಡೆಯಬೇಕೆಂದು ಕೇಂದ್ರ ಸರ್ಕಾರ ಮುಂದಾಗಿದೆ.

ಇದಕ್ಕೆ ಸಂಬಂಧಪಟ್ಟಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯ ಎಲ್ಲಾ ಸೋಷಿಯಲ್ ಮೀಡಿಯಾ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ವಿಶ್ವ ಆರೋಗ್ಯ ಸಂಸ್ಥೆ ತನ್ನ ಯಾವುದೇ ವರದಿಗಳಲ್ಲಿ ಬಿ.1.617 ರೂಪಾಂತರಿ ಕೊರೋನಾವನ್ನು ಭಾರತದ ರೂಪಾಂತರಿ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ, ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೊರೋನಾ ರೂಪಾಂತರಿ ಬಗ್ಗೆ ತಪ್ಪು ಮಾಹಿತಿಗಳು ಪ್ರಸಾರವಾಗುತ್ತಿವೆ ಎಂದು ಹೇಳಿದೆ.

ಈ ಸಂಬಂಧ ಐಟಿ ಸಚಿವಾಲಯ ನಿನ್ನೆ ನೊಟೀಸ್ ನ್ನು ಜಾರಿ ಮಾಡಿದ್ದು ಅದರಲ್ಲಿ, ಆನ್ ಲೈನ್ ನಲ್ಲಿ ತಪ್ಪು ಮಾಹಿತಿ ಹಬ್ಬುತ್ತಿದ್ದು ಭಾರತದ ರೂಪಾಂತರಿ ಕೊರೋನಾ ಜಗತ್ತಿನಾದ್ಯಂತ ಹರಡುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗುತ್ತಿದೆ.ಕೊರೋನಾ ರೂಪಾಂತರಿಗೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಮೇ 12ರಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂದು ಹೇಳಿದೆ.

ಕೊರೋನಾ ವೈರಸ್ ಗೆ ಸಂಬಂಧಪಟ್ಟಂತೆ ಭಾರತದ ರೂಪಾಂತರಿ ಎಂಬ ಉಲ್ಲೇಖವನ್ನಿಟ್ಟುಕೊಂಡು ಬರುತ್ತಿರುವ ಎಲ್ಲಾ ಹೆಸರುಗಳು, ವಿಷಯಗಳು, ಉಲ್ಲೇಖಗಳನ್ನು ತಕ್ಷಣವೇ ತೆಗೆಯುವಂತೆ ಸೋಷಿಯಲ್ ಮೀಡಿಯಾ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಕೇಳಿದೆ.

ಈ ಹಿಂದೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಬರುತ್ತಿರುವ ತಪ್ಪು, ಸುಳ್ಳು ಮಾಹಿತಿಗಳನ್ನು ಆದಷ್ಟು ತಡೆಯುವಂತೆ ಸಲಹೆಯನ್ನು ಹೊರಡಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT