ಸಂಗ್ರಹ ಚಿತ್ರ 
ದೇಶ

ಗಿಡ ನೆಡುವ ಜನರಿಗೆ ಪ್ರಶಸ್ತಿ ನೀಡುವ ಯೋಜನೆ ಪ್ರಾರಂಭಿಸಿದ ಮಧ್ಯಪ್ರದೇಶ ಸರ್ಕಾರ

ಮಳೆಗಾಲದಲ್ಲಿ ಗಿಡಗಳನ್ನು ನೆಡುವ ನಾಗರಿಕರಿಗೆ ಪ್ರಶಸ್ತಿ ನೀಡುವ ಯೋಜನೆ ಅಂಕೂರ್ ಅನ್ನು ಪ್ರಾರಂಭಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್: ಮಳೆಗಾಲದಲ್ಲಿ ಗಿಡಗಳನ್ನು ನೆಡುವ ನಾಗರಿಕರಿಗೆ ಪ್ರಶಸ್ತಿ ನೀಡುವ ಯೋಜನೆ ಅಂಕುರ್ ಅನ್ನು ಪ್ರಾರಂಭಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಸಿಗಳನ್ನು ನೆಡಲು ಮುಂದಾಗಿರುವ ಜನರಿಗೆ ಅವರ ಭಾಗವಹಿಸುವಿಕೆಗಾಗಿ ಪ್ರಾಣವಾಯು ಪ್ರಶಸ್ತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, "ನಾವು ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುತ್ತಿದ್ದೇವೆ. ಆದರೆ ಮರಗಳು ನೈಸರ್ಗಿಕ ಆಮ್ಲಜನಕವನ್ನು ಒದಗಿಸುತ್ತವೆ. ಯಾವುದೇ ಆಮ್ಲಜನಕ ಸ್ಥಾವರಗಳು ಮರಗಳಿಗಿಂತ ದೊಡ್ಡದಲ್ಲ. ಮಳೆಗಾಲದಲ್ಲಿ ಅಂಕುರ್ ಯೋಜನೆಯಡಿ ಸಸಿ ನೆಡುವ ಅಭಿಯಾನವನ್ನು ನಡೆಸಲಾಗುವುದು. ಪ್ರಕೃತಿಯಲ್ಲಿನ ಅಸಮತೋಲನವನ್ನು ಸರಿಪಡಿಸಬೇಕಾದರೆ ಮಳೆಗಾಲದಲ್ಲಿ ಹೆಚ್ಚಿನ ಮರಗಳನ್ನು ನೆಡುವುದಾಗಿ ಪ್ರತಿಜ್ಞೆ ಮಾಡುವಂತೆ ನಾಗರಿಕರನ್ನು ಒತ್ತಾಯಿಸಿದರು.

ಈ ಮೂಲಕ ಸಾರ್ವಜನಿಕರನ್ನು ಈ ಯೋಜನೆಯಲ್ಲಿ ಭಾಗವಹಿಸುವಂತೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀವಾಸ್ತವ್ ಹೇಳಿದರು.

ಟ್ರೀ ಪ್ಲಾಂಟೇಶನ್ ಡ್ರೈವ್‌ನಲ್ಲಿ ಭಾಗವಹಿಸಲು ಬಯಸುವ ಜನರು ವಾಯುದೂತ್ ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಮೊದಲಿಗೆ ಸಸಿ ನೆಡುವವರು ಚಿತ್ರವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ಜೊತೆಗೆ 30 ದಿನಗಳವರೆಗೆ ಸಸಿಯನ್ನು ನೋಡಿಕೊಂಡ ನಂತರ ಮತ್ತೊಂದು ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದು ಶ್ರೀವಾಸ್ತವ್ ಹೇಳಿದರು.

ಪರಿಶೀಲನೆಯ ನಂತರ, ಪ್ರತಿ ಜಿಲ್ಲೆಯಿಂದ ಆಯ್ಕೆಯಾದ ವಿಜೇತರಿಗೆ ಮುಖ್ಯಮಂತ್ರಿ ಪ್ರಾಣವಾಯು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!