ಸಂಗ್ರಹ ಚಿತ್ರ 
ದೇಶ

ಗಿಡ ನೆಡುವ ಜನರಿಗೆ ಪ್ರಶಸ್ತಿ ನೀಡುವ ಯೋಜನೆ ಪ್ರಾರಂಭಿಸಿದ ಮಧ್ಯಪ್ರದೇಶ ಸರ್ಕಾರ

ಮಳೆಗಾಲದಲ್ಲಿ ಗಿಡಗಳನ್ನು ನೆಡುವ ನಾಗರಿಕರಿಗೆ ಪ್ರಶಸ್ತಿ ನೀಡುವ ಯೋಜನೆ ಅಂಕೂರ್ ಅನ್ನು ಪ್ರಾರಂಭಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್: ಮಳೆಗಾಲದಲ್ಲಿ ಗಿಡಗಳನ್ನು ನೆಡುವ ನಾಗರಿಕರಿಗೆ ಪ್ರಶಸ್ತಿ ನೀಡುವ ಯೋಜನೆ ಅಂಕುರ್ ಅನ್ನು ಪ್ರಾರಂಭಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಶನಿವಾರ ಪ್ರಕಟಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಸಿಗಳನ್ನು ನೆಡಲು ಮುಂದಾಗಿರುವ ಜನರಿಗೆ ಅವರ ಭಾಗವಹಿಸುವಿಕೆಗಾಗಿ ಪ್ರಾಣವಾಯು ಪ್ರಶಸ್ತಿ ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. 

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, "ನಾವು ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುತ್ತಿದ್ದೇವೆ. ಆದರೆ ಮರಗಳು ನೈಸರ್ಗಿಕ ಆಮ್ಲಜನಕವನ್ನು ಒದಗಿಸುತ್ತವೆ. ಯಾವುದೇ ಆಮ್ಲಜನಕ ಸ್ಥಾವರಗಳು ಮರಗಳಿಗಿಂತ ದೊಡ್ಡದಲ್ಲ. ಮಳೆಗಾಲದಲ್ಲಿ ಅಂಕುರ್ ಯೋಜನೆಯಡಿ ಸಸಿ ನೆಡುವ ಅಭಿಯಾನವನ್ನು ನಡೆಸಲಾಗುವುದು. ಪ್ರಕೃತಿಯಲ್ಲಿನ ಅಸಮತೋಲನವನ್ನು ಸರಿಪಡಿಸಬೇಕಾದರೆ ಮಳೆಗಾಲದಲ್ಲಿ ಹೆಚ್ಚಿನ ಮರಗಳನ್ನು ನೆಡುವುದಾಗಿ ಪ್ರತಿಜ್ಞೆ ಮಾಡುವಂತೆ ನಾಗರಿಕರನ್ನು ಒತ್ತಾಯಿಸಿದರು.

ಈ ಮೂಲಕ ಸಾರ್ವಜನಿಕರನ್ನು ಈ ಯೋಜನೆಯಲ್ಲಿ ಭಾಗವಹಿಸುವಂತೆ ಮಾಡಲಾಗುತ್ತದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀವಾಸ್ತವ್ ಹೇಳಿದರು.

ಟ್ರೀ ಪ್ಲಾಂಟೇಶನ್ ಡ್ರೈವ್‌ನಲ್ಲಿ ಭಾಗವಹಿಸಲು ಬಯಸುವ ಜನರು ವಾಯುದೂತ್ ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಮೊದಲಿಗೆ ಸಸಿ ನೆಡುವವರು ಚಿತ್ರವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ. ಜೊತೆಗೆ 30 ದಿನಗಳವರೆಗೆ ಸಸಿಯನ್ನು ನೋಡಿಕೊಂಡ ನಂತರ ಮತ್ತೊಂದು ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದು ಶ್ರೀವಾಸ್ತವ್ ಹೇಳಿದರು.

ಪರಿಶೀಲನೆಯ ನಂತರ, ಪ್ರತಿ ಜಿಲ್ಲೆಯಿಂದ ಆಯ್ಕೆಯಾದ ವಿಜೇತರಿಗೆ ಮುಖ್ಯಮಂತ್ರಿ ಪ್ರಾಣವಾಯು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT