ಸಾಂದರ್ಭಿಕ ಚಿತ್ರ 
ದೇಶ

ಮುಂಬೈನಲ್ಲಿ ಬ್ಯೂಟಿಷಿಯನ್ ರೇಪ್: ಬಾಲಿವುಡ್ ನಟಿಯ ಕರ್ನಾಟಕ ಮೂಲದ 'ಬಾಡಿಗಾರ್ಡ್' ವಿರುದ್ಧ ಪ್ರಕರಣ ದಾಖಲು

ಮದುವೆಯಾಗುವುದಾಗಿ ನಂಬಿಸಿ ಬ್ಯೂಟಿಷಿಯನ್ ಅನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟಿಯೊಬ್ಬರ ವೈಯಕ್ತಿಕ ಬಾಡಿಗಾರ್ಡ್ ಕರ್ನಾಟಕ ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಬ್ಯೂಟಿಷಿಯನ್ ಅನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಬಾಲಿವುಡ್‌ನ ಖ್ಯಾತ ನಟಿಯೊಬ್ಬರ ವೈಯಕ್ತಿಕ ಬಾಡಿಗಾರ್ಡ್ ಕರ್ನಾಟಕ ಮೂಲದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಬ್ಯೂಟಿಷಿಯನ್ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಉಪನಗರ ಡಿಎನ್ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

30 ವರ್ಷದ ಸಂತ್ರಸ್ತೆಗೆ ಎಂಟು ವರ್ಷಗಳ ಹಿಂದೆ ಆರೋಪಿಯೊಂದಿಗೆ ಸ್ನೇಹ ಬೆಳೆದಿತ್ತು. ಕಳೆದ ವರ್ಷ ಜೂನ್‌ನಲ್ಲಿ ಆರೋಪಿ ಸಂತ್ರಸ್ತೆಯನ್ನು ಮದುವೆಯಾಗುವ ಪ್ರಸ್ತಾಪವಿಟ್ಟಿದ್ದು ಅದಕ್ಕೆ ಆಕೆ ಸಹ ಒಪ್ಪಿಕೊಂಡಿದ್ದು ನಂತರ, ಆರೋಪಿ ತನ್ನ ಫ್ಲ್ಯಾಟ್‌ನಲ್ಲಿ ಬ್ಯೂಟಿಷಿಯನ್‌ನೊಂದಿಗೆ ಇರಲು ಪ್ರಾರಂಭಿಸಿದನು ಎಂದು ಅಧಿಕಾರಿ ತಿಳಿಸಿದ್ದಾರೆ. 

ಆರೋಪಿ ಅನೇಕ ಸಂದರ್ಭಗಳಲ್ಲಿ ಸಂತ್ರಸ್ತೆಯೊಂದಿಗೆ ದೈಹಿಕವಾಗಿ ಬಳಸಿಕೊಂಡಿದ್ದಾನೆ. ಇನ್ನು ಮದುವೆ ಮಾಡಿಕೊಳ್ಳುವಂತೆ ಆಕೆ ಪದೇ ಪದೇ ಕೇಳುತ್ತಿದ್ದರು ಅದನ್ನು ಕಡೆಗಣಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತನ್ನ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿ ಕಳೆದ ಏಪ್ರಿಲ್ 27ರಂದು ಆರೋಪಿ ಬ್ಯೂಟಿಷಿಯನ್‌ನಿಂದ 50,000 ರೂಗಳನ್ನು ಪಡೆದು ಕರ್ನಾಟಕದಲ್ಲಿನ ತನ್ನ ಊರಿಗೆ ತೆರಳಿದ್ದನು. ನಂತರ, ಆರೋಪಿ ಸಂತ್ರಸ್ತೆಯ ಫೋನ್ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಆರೋಪಿಯ ತಾಯಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಬ್ಯೂಟಿಷಿಯನ್‌ಗೆ ದೂರವಾಣಿ ಕರೆ ಮಾಡಿ. ಇಬ್ಬರೂ ವಿಭಿನ್ನ ಧರ್ಮಗಳಿಗೆ ಸೇರಿದ್ದಾಗಿದ್ದು ಆರೋಪಿ ನಿನ್ನನ್ನು ಮದುವೆಯಾಗಲು ಇಷ್ಟಪಡುತ್ತಿಲ್ಲ ಎಂದು ಮಹಿಳೆ ಸಂತ್ರಸ್ತೆಗೆ ತಿಳಿಸಿದ್ದಾಳೆ. ಅಲ್ಲದೆ ಆರೋಪಿಗೆ ಊರಿನಲ್ಲಿ ವಧು ನಿಶ್ಚಯ ಮಾಡಲಾಗಿದೆ ಎಂದು ಹೇಳಿದ್ದಾಳೆ. 

ಜೂನ್ 5 ರಂದು ಆರೋಪಿ ತನ್ನ ಊರಿನಲ್ಲೇ ಮಹಿಳೆಯೋರ್ವಳನ್ನು ಮದುವೆಯಾಗಲು ಯೋಜಿಸುತ್ತಿದ್ದಾನೆ ಎಂದು ಸಂತ್ರಸ್ತೆಗೆ ಇದೀಗ ತಿಳಿದುಬಂದಿದ್ದು, ಕೂಡಲೇ ಆಕೆ ಮುಂಬೈ ಪೊಲೀಸರಿಗೆ ದೂರು ನೀಡಿದಳು. ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ), 377(ಅಸ್ವಾಭಾವಿಕ ಲೈಂಗಿಕತೆ) ಮತ್ತು 420(ಮೋಸ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT