ಅಧಿಕಾರಿಯಿಂದ ಯುವಕನಿಗೆ ಥಳಿತ 
ದೇಶ

ಚತ್ತೀಸ್ ಗಢ: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಅಧಿಕಾರಿ; ವಿಡಿಯೋ ವೈರಲ್

ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಚತ್ತೀಸ್ ಗಢದಲ್ಲೂ ವರದಿಯಾಗಿದೆ. 

ಸೂರಜ್ ಪುರ: ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಚತ್ತೀಸ್ ಗಢದಲ್ಲೂ ವರದಿಯಾಗಿದೆ. 

ಸೂರಜ್ ಪುರ ಜಿಲ್ಲೆಯ ಜಿಲ್ಲಾಧಿಕಾರಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಥಳಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಧಿಕಾರಿ ಕ್ಷಮೆ ಕೋರಿದ್ದಾರೆ. 

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಲ್ಲಿದೆ.  ಆದರೆ ಅಮಾನ್ ಮಿತ್ತಲ್ (23) ಎಂಬ ವ್ಯಕ್ತಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಅಧಿಕಾರಿಗಳು ಆತನನ್ನು ತಡೆದಿದ್ದರು. ತಾನು ಸಂಚರಿಸುತ್ತಿರುವುದಕ್ಕೆ ಕಾರಣ ಹೇಳಲು ಯತ್ನಿಸುತ್ತಿದ್ದ ಯವಕ ಮೊಬೈಲ್ ಫೋನ್ ಹಾಗೂ ಕಾಗದವನ್ನು ತೋರಿಸುತ್ತಿದ್ದದ್ದು ವಿಡಿಯೋದಲ್ಲಿ ದಾಖಲಾಗಿದೆ. ಆದರೆ ಅಧಿಕಾರಿ ಅದನ್ನು ಕಸಿದುಕೊಂಡು ಎಸೆದಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.  

ಈ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು ಯುವಕನನ್ನು ಥಳಿಸಲು ಪ್ರಾರಂಭಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಥಳಿಸುವಂತೆ ಹೇಳಿದ್ದಾರೆ. ಪರಿಣಾಮ ಯುವಕನಿಗೆ ಅಧಿಕಾರಿಗಳು ದೊಣ್ಣೆಯಿಂದ ಹೊಡೆದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ರಣ್ ಬೀರ್ ಶರ್ಮಾ "ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಯುವಕನೋರ್ವನಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. 

ಈ ಸಾಂಕ್ರಾಮಿಕದ ಅವಧಿಯಲ್ಲಿ ಸೂರಜ್ ಪುರ ಜಿಲ್ಲೆ ಅಪಾರ ಪ್ರಮಾಣದ ಜೀವ ಹಾನಿಯನ್ನು ಕಂಡಿದೆ. ಈ ಸಮಸ್ಯೆಯನ್ನು ನಿಭಾಯಿಸುವುದಕ್ಕಾಗಿ ನಾವು ರಾಜ್ಯ ಸರ್ಕಾರದ ಅಧಿಕಾರಿಗಳು ಶ್ರಮಿಸುತ್ತಿದ್ದೇವೆ ಎಂದು ತಮ್ಮ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT