ಅಧಿಕಾರಿಯಿಂದ ಯುವಕನಿಗೆ ಥಳಿತ 
ದೇಶ

ಚತ್ತೀಸ್ ಗಢ: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ವ್ಯಕ್ತಿಗೆ ಥಳಿಸಿದ ಅಧಿಕಾರಿ; ವಿಡಿಯೋ ವೈರಲ್

ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಚತ್ತೀಸ್ ಗಢದಲ್ಲೂ ವರದಿಯಾಗಿದೆ. 

ಸೂರಜ್ ಪುರ: ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಚತ್ತೀಸ್ ಗಢದಲ್ಲೂ ವರದಿಯಾಗಿದೆ. 

ಸೂರಜ್ ಪುರ ಜಿಲ್ಲೆಯ ಜಿಲ್ಲಾಧಿಕಾರಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಥಳಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಧಿಕಾರಿ ಕ್ಷಮೆ ಕೋರಿದ್ದಾರೆ. 

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಲ್ಲಿದೆ.  ಆದರೆ ಅಮಾನ್ ಮಿತ್ತಲ್ (23) ಎಂಬ ವ್ಯಕ್ತಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಅಧಿಕಾರಿಗಳು ಆತನನ್ನು ತಡೆದಿದ್ದರು. ತಾನು ಸಂಚರಿಸುತ್ತಿರುವುದಕ್ಕೆ ಕಾರಣ ಹೇಳಲು ಯತ್ನಿಸುತ್ತಿದ್ದ ಯವಕ ಮೊಬೈಲ್ ಫೋನ್ ಹಾಗೂ ಕಾಗದವನ್ನು ತೋರಿಸುತ್ತಿದ್ದದ್ದು ವಿಡಿಯೋದಲ್ಲಿ ದಾಖಲಾಗಿದೆ. ಆದರೆ ಅಧಿಕಾರಿ ಅದನ್ನು ಕಸಿದುಕೊಂಡು ಎಸೆದಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.  

ಈ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು ಯುವಕನನ್ನು ಥಳಿಸಲು ಪ್ರಾರಂಭಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಥಳಿಸುವಂತೆ ಹೇಳಿದ್ದಾರೆ. ಪರಿಣಾಮ ಯುವಕನಿಗೆ ಅಧಿಕಾರಿಗಳು ದೊಣ್ಣೆಯಿಂದ ಹೊಡೆದಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ರಣ್ ಬೀರ್ ಶರ್ಮಾ "ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಯುವಕನೋರ್ವನಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. 

ಈ ಸಾಂಕ್ರಾಮಿಕದ ಅವಧಿಯಲ್ಲಿ ಸೂರಜ್ ಪುರ ಜಿಲ್ಲೆ ಅಪಾರ ಪ್ರಮಾಣದ ಜೀವ ಹಾನಿಯನ್ನು ಕಂಡಿದೆ. ಈ ಸಮಸ್ಯೆಯನ್ನು ನಿಭಾಯಿಸುವುದಕ್ಕಾಗಿ ನಾವು ರಾಜ್ಯ ಸರ್ಕಾರದ ಅಧಿಕಾರಿಗಳು ಶ್ರಮಿಸುತ್ತಿದ್ದೇವೆ ಎಂದು ತಮ್ಮ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT