ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೆಹಲಿ, ಹರಿಯಾಣ, ರಾಜಸ್ಥಾನದಲ್ಲಿ ಲಾಕ್ ಡೌನ್ ವಿಸ್ತರಣೆ

ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಸೋಂಕು ಹಾಗೂ ಸಾವನ್ನು ನಿಯಂತ್ರಿಸಲು ದೆಹಲಿ, ಹರಿಯಾಣ, ರಾಜಸ್ಥಾನ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೇ ಅಂತ್ಯದವರೆಗೂ ಈಗಾಗಲೇ ಜಾರಿಗೊಳಿಸಲಾಗಿರುವ ಕೋವಿಡ್- ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ನವದೆಹಲಿ: ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಸೋಂಕು ಹಾಗೂ ಸಾವನ್ನು ನಿಯಂತ್ರಿಸಲು ದೆಹಲಿ, ಹರಿಯಾಣ, ರಾಜಸ್ಥಾನ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೇ ಅಂತ್ಯದವರೆಗೂ ಈಗಾಗಲೇ ಜಾರಿಗೊಳಿಸಲಾಗಿರುವ ಕೋವಿಡ್- ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಈಗಾಗಲೇ ಇರುವ ಲಾಕ್ ಡೌನ್, ಮತ್ತೆ ಒಂದು ವಾರ ಮುಂದುವರೆಯಲಿದೆ. ಒಂದು ವೇಳೆ ಕೋವಿಡ್-19
ಸಂಖ್ಯೆಯಲ್ಲಿ ಇಳಿಕೆ ಮುಂದುವರೆದರೆ ಮೇ 31ರಿಂದ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಜಸ್ಥಾನ ಸರ್ಕಾರ ಜೂನ್ 8 ರವರೆಗೂ ಲಾಕ್ ಡೌನ್ ವಿಸ್ತರಿಸಿದೆ. ಕೋವಿಡ್-19 ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆಯಾದಂತಹ ಜಿಲ್ಲೆಗಳಲ್ಲಿ ಜೂನ್ 1 ರಿಂದ ವಾಣಿಜ್ಯ ಚಟುವಟಿಕೆಗಳಿಗೆ ಕೆಲ ಸಡಿಲತೆ ಅವಕಾಶ ನೀಡುವ ಸಾಧ್ಯತೆಯಿರುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.

ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿರುವ ಹರಿಯಾಣ ಸರ್ಕಾರ, ಪಾಸಿಟಿವಿಟಿ ಮತ್ತು ಸಾವಿನ ಪ್ರಮಾಣ ಕಡಿಮೆಯಾದರೆ, ಕೆಲ
ವಿನಾಯಿತಿ ನೀಡುವುದಾಗಿ ಹೇಳಿದೆ. ಈ ಹಿಂದೆ ಮೇ 24 ರವರೆಗೂ ಘೋಷಿಸಲಾಗಿದ್ದ ಲಾಕ್ ಡೌನ್ ನ್ನು ಮೇ 31ರವರೆಗೂ ವಿಸ್ತರಿಸಲಾಗಿದೆ. ಆದಾಗ್ಯೂ, ಈ ಅವಧಿಯಲ್ಲಿ ಸ್ವತಂತ್ರವಾದ ಶಾಪ್ ಗಳಂತಹವು ಕಾರ್ಯನಿರ್ವಹಿಸಲು ಕೆಲ ವಿನಾಯಿತಿ ನೀಡಲಾಗುವುದು ಎಂದು ಹರಿಯಾಣ ಮುಖ್ಯ ಕಾರ್ಯದರ್ಶಿ ವಿಜಯ್ ವರ್ಧನ್ ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಪ್ರಕರಣಗಳು ನಿರಂತರವಾಗಿ ಮುಂದುವರೆಯುತ್ತಿರುವುದರಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಪುದುಚೇರಿ
ಸರ್ಕಾರ ಭಾನುವಾರ ಆದೇಶಿಸಿದೆ. ಈ ಹಿಂದೆ ಮೇ 10 ರಿಂದ ಮೇ 24ರ ಮಧ್ಯರಾತ್ರಿಯವರೆಗೂ ಎರಡು ವಾರಗಳ ಧೀರ್ಘ ಲಾಕ್ ಡೌನ್ ಘೋಷಿಸಲಾಗಿತ್ತು.

ಇನ್ನೂ ಈಶಾನ್ಯ ರಾಜ್ಯಗಳಲ್ಲಿ ಐಜ್ವಾಲ್ ಮತ್ತಿತರ ಜಿಲ್ಲಾ ಕೇಂದ್ರಗಳಲ್ಲಿ ಈ ಮಾಸಾಂತ್ಯದವರೆಗೂ ಮೀಜೊರಾಂ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಈ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT