ಸ್ಪುಟ್ನಿಕ್ ವಿ ಲಸಿಕೆ 
ದೇಶ

ಭಾರತದಲ್ಲಿ ಆಗಸ್ಟ್ ನಿಂದ ದೊಡ್ಡ ಪ್ರಮಾಣದಲ್ಲಿ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ಉತ್ಪಾದನೆ: ರಾಯಭಾರಿ

ಭಾರತದಲ್ಲಿ ಕೋವಿಡ್ ನಿರೋಧಕ ಲಸಿಕೆ ಸ್ಪುಟ್ನಿಕ್ ವಿ ಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ರಷ್ಯಾ ಯೋಜಿಸಿದೆ ಎಂದು ರಷ್ಯಾದಲ್ಲಿರುವ ಭಾರತದ ರಾಯಭಾರಿ ಡಿ. ಬಾಲಾ ವೆಂಕಟೇಶ್ ವರ್ಮಾ ಹೇಳಿದ್ದಾರೆ.

ಮಾಸ್ಕೋ: ಭಾರತದಲ್ಲಿ ಕೋವಿಡ್ ನಿರೋಧಕ ಲಸಿಕೆ ಸ್ಪುಟ್ನಿಕ್ ವಿ ಯನ್ನು ದೊಡ್ಡ ಪ್ರಮಾಣದಲ್ಲಿ ತಯಾರಿಸಲು ರಷ್ಯಾ ಯೋಜಿಸಿದೆ ಎಂದು ರಷ್ಯಾದಲ್ಲಿರುವ ಭಾರತದ ರಾಯಭಾರಿ ಡಿ. ಬಾಲಾ ವೆಂಕಟೇಶ್ ವರ್ಮಾ ಹೇಳಿದ್ದಾರೆ.

ಲಸಿಕೆಯನ್ನು ಭಾರತದಲ್ಲಿ ಮೂರು ಹಂತಗಳಲ್ಲಿ ಉತ್ಪಾದಿಸಲಾಗುವುದು ಎಂದು ಮಾಹಿತಿ ನೀಡಿದ ಅವರು, ಸೇಂಟ್ ಪೀಟರ್ಸ್‌ ಬರ್ಗ್‌ ನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. 'ಲಸಿಕೆ ತಯಾರಿಸಲು ಭಾರತ ಹಾಗೂ ರಷ್ಯಾ ಕೈಗೊಂಡಿರುವ ವ್ಯವಸ್ಥೆಗಳನ್ನು ವಿವರಿಸಿದರು.
ಭಾರತಕ್ಕೆ ಈವರೆಗೆ ಸ್ಪುಟ್ನಿಕ್ ವಿ ಲಸಿಕೆಯ 2.10 ಲಕ್ಷ ಡೋಸ್ ಗಳನ್ನು ಪೂರೈಸಿದೆ. ಮೇ ಅಂತ್ಯದ ವೇಳೆಗೆ 3 ಮಿಲಿಯನ್ ಡೋಸ್ ಲಸಿಕೆ ಪೂರೈಸಿಲಿದೆ. ಜೂನ್ ಅಂತ್ಯದ ವೇಳೆಗೆ 5 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಆಗಸ್ಟ್ ವೇಳೆಗೆ ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಒಟ್ಟಾರೆ ಭಾರತದಲ್ಲಿ 850 ಮಿಲಿಯನ್ ಡೋಸ್‌ ಗಳಿಗೂ ಹೆಚ್ಚು ಸ್ಪುಟ್ನಿಕ್ ಲಸಿಕೆಗಳನ್ನು ತಯಾರಿಸಲು ಯೋಜಿಸಿದೆ. ಪ್ರಪಂಚದಲ್ಲಿ ತಯರಾಗುವ ಸ್ಪುಟ್ನಿಕ್ ವಿ ಲಸಿಕೆಯ ಶೇ. 65 ರಿಂದ 70 ರಷ್ಟು ಭಾರತದಲ್ಲಿ ತಯಾರಿಸಲಾಗುತ್ತದೆ. ಸ್ಪುಟ್ನಿಕ್ ವಿ ಲಸಿಕೆ ಭಾರತದಲ್ಲಿ ಮೂರು ಹಂತಗಳಲ್ಲಿ ತಯಾರಾಗಲಿದ್ದು, ಮೊದಲ ಹಂತದಲ್ಲಿ, ಇದನ್ನು ರಷ್ಯಾದಿಂದ ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದರು.

ಇದು ಈಗಾಗಲೇ ಪ್ರಾರಂಭವಾಗಿದೆ. ಎರಡನೇ ಹಂತದಲ್ಲಿ ಆರ್‌ ಡಿ ಐ ಎಫ್ ಬೃಹತ್ ಪ್ರಮಾಣದಲ್ಲಿ ಭಾರತಕ್ಕೆ ಕಳುಹಿಸಲಿದೆ. ಇದು ಬಳಸಲು ಸಿದ್ಧವಾಗಿರುವ ಲಸಿಕೆಯಾಗಿದ್ದು, ಆದರೆ ಭಾರತದಲ್ಲಿ ಬಾಟಲ್ ಮಾಡಬೇಕಾಗುತ್ತದೆ ಎಂದು ಅವರು ವಿವರಿಸಿದರು. ಮೂರನೇ ಹಂತದಲ್ಲಿ ರಷ್ಯಾ ಲಸಿಕೆಯ ತಂತ್ರಜ್ಞಾನವನ್ನು ಭಾರತೀಯ ಸಂಸ್ಥೆಗಳಿಗೆ ವರ್ಗಾಯಿಸಲಿದ್ದು, ಈ ಸಂಸ್ಥೆಗಳು ಲಸಿಕೆಯನ್ನು ತಯಾರಿಸಲಿವೆ. ಒಟ್ಟಾರೆಯಾಗಿ, ಎಲ್ಲಾ ಹಂತಗಳಲ್ಲಿ 850 ದಶ ಲಕ್ಷಕ್ಕೂ ಹೆಚ್ಚಿನ ಪ್ರಮಾಣದ ಲಸಿಕೆ ಉತ್ಪಾದಿಸಲಾಗುತ್ತದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT