ಕೇಂದ್ರ ಸಚಿವ ಹರ್ಷವರ್ಧನ್, ರಾಮ್ ದೇವ್ 
ದೇಶ

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ

ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಮದೇವ್ ಅವರಿಗೆ ಹೇಳಿದ್ದಾರೆ.

ನವದೆಹಲಿ: ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆ
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ರಾಮದೇವ್ ಅವರಿಗೆ ಹೇಳಿದ್ದಾರೆ.

ಅಲೋಪತಿ' ಸ್ಟುಪಿಡ್ ಸೈನ್ಸ್' ಮತ್ತು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದಿಸಲ್ಪಟ್ಟಿರುವ ರೆಮಿಡಿಸಿವಿರ್, 
ಫೆವಿಫ್ಲು ಮತ್ತಿತರ ಔಷಧಗಳು, ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ವಿಫಲವಾಗಿವೆ ಎಂದು ರಾಮ್ ದೇವ್ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಲೋಪತಿ ಔಷಧದಿಂದ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ರಾಮ್ ದೇವ್ ಹೇಳಿರುವುದಾಗಿ ಭಾರತೀಯ ವೈದ್ಯಕೀಯ ಸಂಘ ಹೇಳಿತ್ತು. ಆದರೆ, ಈ  ಹೇಳಿಕೆಯನ್ನು ಹರಿದ್ವಾರ ಮೂಲದ ಪಂತಜಲಿ ಯೋಗಪೀಠ ಟ್ರಸ್ಟ್ ನಿರಾಕರಿಸಿದೆ.

ಈ ಸಂಬಂಧ ರಾಮ್ ದೇವ್ ಅವರಿಗೆ ಪತ್ರ ಬರೆದಿರುವ ಹರ್ಷವರ್ಧನ್, ಅಲೋಪತಿ ಕುರಿತ ತಮ್ಮ ಹೇಳಿಕೆಯನ್ನು
ಹಿಂಪಡೆಯುವಂತೆ ಸೂಚಿಸಿದ್ದಾರೆ. ಈ ಹೇಳಿಕೆ ಕೊರೋನಾ ವಾರಿಯರ್ಸ್ ಹಾಗೂ ದೇಶದ  ಭಾವನೆಗಳಿಗೆ ಅಪಮಾನಿಸಿದೆ. ಅಲೋಪತಿ ಕುರಿತ ನಿಮ್ಮ ಹೇಳಿಕೆಯು ಆರೋಗ್ಯ ಕಾರ್ಯಕರ್ತರ ಆತ್ಮಸ್ಥೈರ್ಯಕ್ಕೆ ಧಕ್ಕೆ ತರುತ್ತಿದೆ. ಕೋವಿಡ್ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಲೋಪತಿ ಔಷಧ ಕೋಟ್ಯಂತರ ಜನರ ಜೀವವನ್ನು ಉಳಿಸಿದೆ. ಲಕ್ಷಾಂತರ ಜನರ ಸಾವಿಗೆ ಅಲೋಪತಿ ಕಾರಣ ನಿಮ್ಮ ಹೇಳಿಕೆ ದುರಾದೃಷ್ಟಕರ ಸಂಗತಿ ಎಂದು ಹರ್ಷವರ್ಧನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT