ಕೇಂದ್ರ ಸಚಿವ ಹರ್ಷವರ್ಧನ್, ರಾಮ್ ದೇವ್ 
ದೇಶ

ಅಲೋಪತಿ ಕುರಿತ ಹೇಳಿಕೆ ಹಿಂಪಡೆಯುವಂತೆ ರಾಮ್ ದೇವ್ ಗೆ ಕೇಂದ್ರ ಸಚಿವ ಹರ್ಷವರ್ಧನ್ ಸೂಚನೆ

ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಮದೇವ್ ಅವರಿಗೆ ಹೇಳಿದ್ದಾರೆ.

ನವದೆಹಲಿ: ಅಲೋಪತಿ ಕುರಿತ ಯೋಗ ಗುರು ರಾಮ್ ದೇವ್ ಅವರ ಹೇಳಿಕೆ ದುರಾದೃಷ್ಟಕರವಾಗಿದ್ದು, ಅದನ್ನು ಹಿಂಪಡೆಯುವಂತೆ
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ರಾಮದೇವ್ ಅವರಿಗೆ ಹೇಳಿದ್ದಾರೆ.

ಅಲೋಪತಿ' ಸ್ಟುಪಿಡ್ ಸೈನ್ಸ್' ಮತ್ತು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮೋದಿಸಲ್ಪಟ್ಟಿರುವ ರೆಮಿಡಿಸಿವಿರ್, 
ಫೆವಿಫ್ಲು ಮತ್ತಿತರ ಔಷಧಗಳು, ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ವಿಫಲವಾಗಿವೆ ಎಂದು ರಾಮ್ ದೇವ್ ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಲೋಪತಿ ಔಷಧದಿಂದ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ರಾಮ್ ದೇವ್ ಹೇಳಿರುವುದಾಗಿ ಭಾರತೀಯ ವೈದ್ಯಕೀಯ ಸಂಘ ಹೇಳಿತ್ತು. ಆದರೆ, ಈ  ಹೇಳಿಕೆಯನ್ನು ಹರಿದ್ವಾರ ಮೂಲದ ಪಂತಜಲಿ ಯೋಗಪೀಠ ಟ್ರಸ್ಟ್ ನಿರಾಕರಿಸಿದೆ.

ಈ ಸಂಬಂಧ ರಾಮ್ ದೇವ್ ಅವರಿಗೆ ಪತ್ರ ಬರೆದಿರುವ ಹರ್ಷವರ್ಧನ್, ಅಲೋಪತಿ ಕುರಿತ ತಮ್ಮ ಹೇಳಿಕೆಯನ್ನು
ಹಿಂಪಡೆಯುವಂತೆ ಸೂಚಿಸಿದ್ದಾರೆ. ಈ ಹೇಳಿಕೆ ಕೊರೋನಾ ವಾರಿಯರ್ಸ್ ಹಾಗೂ ದೇಶದ  ಭಾವನೆಗಳಿಗೆ ಅಪಮಾನಿಸಿದೆ. ಅಲೋಪತಿ ಕುರಿತ ನಿಮ್ಮ ಹೇಳಿಕೆಯು ಆರೋಗ್ಯ ಕಾರ್ಯಕರ್ತರ ಆತ್ಮಸ್ಥೈರ್ಯಕ್ಕೆ ಧಕ್ಕೆ ತರುತ್ತಿದೆ. ಕೋವಿಡ್ ವಿರುದ್ಧದ ನಮ್ಮ ಹೋರಾಟವನ್ನು ದುರ್ಬಲಗೊಳಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಲೋಪತಿ ಔಷಧ ಕೋಟ್ಯಂತರ ಜನರ ಜೀವವನ್ನು ಉಳಿಸಿದೆ. ಲಕ್ಷಾಂತರ ಜನರ ಸಾವಿಗೆ ಅಲೋಪತಿ ಕಾರಣ ನಿಮ್ಮ ಹೇಳಿಕೆ ದುರಾದೃಷ್ಟಕರ ಸಂಗತಿ ಎಂದು ಹರ್ಷವರ್ಧನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT