ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ 
ದೇಶ

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ!

ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ.

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವುದರಿಂದ ಕನ್ನಡ ಭಾಷೆಯ ಪ್ರಭಾವ ಇಲ್ಲಿ ಹೆಚ್ಚು. ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ ಕೂಡ ಇಲ್ಲಿನ ಜನರ ಕನ್ನಡ ಪ್ರೀತಿಗೇನು ಕೊರತೆಯಿಲ್ಲ. ಮಂಜೇಶ್ವರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕನ್ನಡಿಗರೇ ಇದ್ದು, ಕೇರಳ ರಾಜ್ಯ ಮಂಜೇಶ್ವರ ತಾಲ್ಲೂಕನ್ನು ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ ಎಂದು ಘೋಷಿಸಿದೆ.

 ಇಲ್ಲಿನ ಶಾಸಕರು ಈ ಹಿಂದೆ ಕೂಡ ವಿಧಾನಸಭೆಯಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುತ್ತಿದ್ದರು. ಆ ಸಂಪ್ರದಾಯವನ್ನು ಅಶ್ರಫ್ ಮುಂದುವರಿಸಿದ್ದಾರೆ. ಇಂದು ಅಧಿವೇಶನ ಆರಂಭಕ್ಕೆ ಮುನ್ನ ಪ್ರಮಾಣ ವಚನ ಸ್ವೀಕಾರ ವೇಳೆ, ಎ ಕೆ ಎಂ ಅಶ್ರಫ್ ಅವರು ಅಚ್ಚ ಕನ್ನಡದಲ್ಲಿ ಅಲ್ಲಾಹು ಹೆಸರಿನಲ್ಲಿ ಪ್ರತಿಜ್ಞೆಗೈದು ಗಮನ ಸೆಳೆದರು.

ಅಶ್ರಫ್ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT