ಸುಪ್ರೀಂ ಕೋರ್ಟ್ 
ದೇಶ

ನಾರದಾ ಸ್ಟಿಂಗ್ ಆಪರೇಷನ್ ಕೇಸು: ಹೈಕೋರ್ಟ್ ನ ಗೃಹ ಬಂಧನ ಆದೇಶ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಸಿಬಿಐ

ನಾರದ ಸ್ಟಿಂಗ್ ಆಪರೇಷನ್ ಕೇಸಿನಲ್ಲಿ ನಾಲ್ವರು ಟಿಎಂಸಿ ನಾಯಕರನ್ನು ಗೃಹ ಬಂಧನಕ್ಕೊಳಪಡಿಸುವಂತೆ ಕೋಲ್ಕತ್ತಾ ಹೈಕೋರ್ಟ್ ನೀಡಿರುವ ಆದೇಶಕ್ಕೆ ವಿರುದ್ಧವಾಗಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ನವದೆಹಲಿ: ನಾರದ ಸ್ಟಿಂಗ್ ಆಪರೇಷನ್ ಕೇಸಿನಲ್ಲಿ ನಾಲ್ವರು ಟಿಎಂಸಿ ನಾಯಕರನ್ನು ಗೃಹ ಬಂಧನಕ್ಕೊಳಪಡಿಸುವಂತೆ ಕೋಲ್ಕತ್ತಾ ಹೈಕೋರ್ಟ್ ನೀಡಿರುವ ಆದೇಶಕ್ಕೆ ವಿರುದ್ಧವಾಗಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಅಲ್ಲದೆ ಪ್ರಕರಣದ ವಿಚಾರಣೆಯನ್ನು ಇಂದಿಗೆ ಮುಂದೂಡುವಂತೆ ಕೂಡ ಸಿಬಿಐ ಕೋರಿದೆ.

ಪಶ್ಚಿಮ ಬಂಗಾಳದ ಸಚಿವರಾದ ಫಿರ್ಹಾದ್ ಹಕಿಮ್, ಸುಬ್ರತಾ ಮುಖರ್ಜಿ, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಕೋಲ್ಕತ್ತಾದ ಮಾಜಿ ಮೇಯರ್ ಸೊವನ್ ಚಟರ್ಜಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಕಳೆದ ಮೇ 7ರಂದು ಅನುಮತಿ ನೀಡಿದ್ದರು.

ಈ ಕುರಿತು ಸಿಬಿಐ ರಾಜ್ಯಪಾಲರಿಗೆ ಕೋರಿಕೆ ಸಲ್ಲಿಸಿತ್ತು.ಈ ನಾಲ್ವರು ನಾಯಕರು ಲಂಚ ಪಡೆದುಕೊಳ್ಳುವುದು ರಹಸ್ಯ ಕ್ಯಾಮರಾ ಕಾರ್ಯಾಚರಣೆಯಲ್ಲಿ ಸೆರೆಯಲಾಗಿದೆ ಎಂಬ ಆರೋಪವಿದ್ದು ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ತೀವ್ರ ನಾಟಕೀಯ ಸನ್ನಿವೇಶ ಮಧ್ಯೆ ಈ ನಾಲ್ವರನ್ನು ಸಿಬಿಐ ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT