ಕೊರೋನಾದಿಂದ ಮೃತಪಟ್ಟ ವ್ಯಕ್ತಿ (ಸಂಗ್ರಹ ಚಿತ್ರ) 
ದೇಶ

ಕೋವಿಡ್-19 ಸಂತ್ರಸ್ತರ ಕುಟುಂಬಕ್ಕೆ ಪರಿಹಾರ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ 

`ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 

ನವದೆಹಲಿ: `ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 

ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ಎಂಆರ್ ಶಾ ಅವರಿದ್ದ ಕೋರ್ಟ್ ನ ರಜೆ ಪೀಠ, ಕೋವಿಡ್-19 ಸಂತ್ರಸ್ತರಿಗೆ ನೀಡಲಾಗುತ್ತಿರುವ ಮರಣ ಪ್ರಮಾಣಪತ್ರದ ಕುರಿತು ಐಸಿಎಂಆರ್ ಮಾರ್ಗಸೂಚಿಗಳನ್ನು ಹಾಜರುಪಡಿಸಲು ಕೇಂದ್ರಕ್ಕೆ ಸೂಚನೆ ನೀಡಿದ್ದು, ಈ ರೀತಿ ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿ ಹೊಂದಿರಬೇಕೆಂದು ಹೇಳಿದೆ. 

ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿಗೆ ಹಾಗೂ ಕೋವಿಡ್-19 ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿಗಳನ್ನು 2005 ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೊರೋನಾ ಸಂತ್ರಸ್ತರಿಗೆ 4 ಲಕ್ಷ ರೂಪಾಯಿಗಳನ್ನು ನೀಡುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಲಾಗಿದ್ದ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. 

ಮರಣ ಪ್ರಮಾಣಪತ್ರಗಳ ವಿಷಯದಲ್ಲಿ ಏಕರೂಪ ನೀತಿ ಅನುಸರಿಸದೇ ಇದ್ದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ಕೋವಿಡ್-19 ನಿಂದ ಪರಿಹಾರ ಪಡೆಯುವುದು ಹಾಗೂ ಇತರ ಪ್ರಯೋಜನಗಳನ್ನು ಪಡೆಯುವುದು ಕಷ್ಟವಾಗಲಿದೆ ಎಂದು ಕೋರ್ಟ್ ಹೇಳಿದ್ದು ಜೂ.11ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

SCROLL FOR NEXT