ಕೊರೋನಾದಿಂದ ಮೃತಪಟ್ಟ ವ್ಯಕ್ತಿ (ಸಂಗ್ರಹ ಚಿತ್ರ) 
ದೇಶ

ಕೋವಿಡ್-19 ಸಂತ್ರಸ್ತರ ಕುಟುಂಬಕ್ಕೆ ಪರಿಹಾರ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್ 

`ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 

ನವದೆಹಲಿ: `ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. 

ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ಎಂಆರ್ ಶಾ ಅವರಿದ್ದ ಕೋರ್ಟ್ ನ ರಜೆ ಪೀಠ, ಕೋವಿಡ್-19 ಸಂತ್ರಸ್ತರಿಗೆ ನೀಡಲಾಗುತ್ತಿರುವ ಮರಣ ಪ್ರಮಾಣಪತ್ರದ ಕುರಿತು ಐಸಿಎಂಆರ್ ಮಾರ್ಗಸೂಚಿಗಳನ್ನು ಹಾಜರುಪಡಿಸಲು ಕೇಂದ್ರಕ್ಕೆ ಸೂಚನೆ ನೀಡಿದ್ದು, ಈ ರೀತಿ ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿ ಹೊಂದಿರಬೇಕೆಂದು ಹೇಳಿದೆ. 

ಮರಣ ಪ್ರಮಾಣಪತ್ರಗಳನ್ನು ನೀಡುವುದರಲ್ಲಿ ಏಕರೂಪ ನೀತಿಗೆ ಹಾಗೂ ಕೋವಿಡ್-19 ನಿಂದ ಮೃತಪಟ್ಟವರಿಗೆ 4 ಲಕ್ಷ ರೂಪಾಯಿಗಳನ್ನು 2005 ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೊರೋನಾ ಸಂತ್ರಸ್ತರಿಗೆ 4 ಲಕ್ಷ ರೂಪಾಯಿಗಳನ್ನು ನೀಡುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಲಾಗಿದ್ದ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. 

ಮರಣ ಪ್ರಮಾಣಪತ್ರಗಳ ವಿಷಯದಲ್ಲಿ ಏಕರೂಪ ನೀತಿ ಅನುಸರಿಸದೇ ಇದ್ದಲ್ಲಿ ಸಂತ್ರಸ್ತರ ಕುಟುಂಬಗಳಿಗೆ ಕೋವಿಡ್-19 ನಿಂದ ಪರಿಹಾರ ಪಡೆಯುವುದು ಹಾಗೂ ಇತರ ಪ್ರಯೋಜನಗಳನ್ನು ಪಡೆಯುವುದು ಕಷ್ಟವಾಗಲಿದೆ ಎಂದು ಕೋರ್ಟ್ ಹೇಳಿದ್ದು ಜೂ.11ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT