ನಟಿ ಸೋನಾಲಿ ಕುಲಕರ್ಣಿ 
ದೇಶ

ಮರಾಠಿ ನಟಿ ಸೊನಾಲಿ ಕುಲಕರ್ಣಿ ಮನೆಗೆ ನುಗ್ಗಿದ ಆಗಂತುಕ; ತಂದೆ ಮೇಲೆ ಚಾಕುವಿನಿಂದ ಹಲ್ಲೆ

ಖ್ಯಾತ ಮರಾಠಿ ನಟಿ ಸೊನಾಲಿ ಕುಲಕರ್ಣಿ ಮನೆಗೆ ಆಗಂತುಕನೋರ್ವ ನುಗ್ಗಿದ್ದು, ನಟಿಯ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಪುಣೆ: ಖ್ಯಾತ ಮರಾಠಿ ನಟಿ ಸೊನಾಲಿ ಕುಲಕರ್ಣಿ ಮನೆಗೆ ಆಗಂತುಕನೋರ್ವ ನುಗ್ಗಿದ್ದು, ನಟಿಯ ತಂದೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಮಹಾರಾಷ್ಟ್ರದ ಪುಣೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಪುಣೆಯ ನಿಗ್ಡಿಯಲ್ಲಿರುವ ನಟಿ ಸೋನಾಲಿ ಕುಲಕರ್ಣಿ ಅವರ ಅಪಾರ್ಟ್ ಮೆಂಟ್ ನಲ್ಲಿ ದರೋಡೆ ಮಾಡಲು ಆತ ಯತ್ನಿಸಿದ್ದು, ಅಪಾರ್ಟ್ ಮೆಂಟ್ ನ ಮೇಲ್ಛಾವಣಿ ಮುಖಾಂತರವಾಗಿ ಆತ  ಮನೆಯೊಳಗೆ ನುಗ್ಗಿದ್ದಾನೆ. ಈ ವೇಳೆ ಕಳ್ಳನನ್ನು ಗಮನಿಸಿದ ನಟಿಯ ತಂದೆ ಆತನನ್ನು ಹಿಡಿಯಲು ಯತ್ನಿಸಿದ್ದು, ಈ ವೇಳೆ ಆತ ಚಾಕುವಿನಿದಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ನಟಿ ತಂದೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮನೆಯವರ ಕೂಗಾಟ ಕೇಳೆ ಎಚ್ಚೆತ್ತ ಅಕ್ಕಪಕ್ಕದ ಮನೆಯವರು  ಓಡಿ ಹೋಗುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಕಳ್ಳನನ್ನು 28 ವರ್ಷದ ಅಜಯ್ ಶೆಗ್ಟೆ ಎಂದು ಗುರುತಿಸಲಾಗಿದೆ.

ತಾನು ಸೋನಾಲಿ ಅಭಿಮಾನಿ ಎಂದು ಹೇಳಿಕೊಂಡಿದ್ದ ಆಗಂತುಕ:
ಇನ್ನು ಮನೆಗೆ ಬಂದು ನಟಿ ತಂದೆಯ ಕೈಗೆ ಸಿಕ್ಕ ಆತ ತಾನು ಸೋನಾಲಿ ಅಭಿಮಾನಿ ಎಂದು ಹೇಳಿಕೊಂಡಿದ್ದನಂತೆ. ಈ ವೇಳೆ ಮನೆಯವರು ಮನೆಯಿಂದ ಹೊರಗೆ ಹೋಗುವಂತೆ ಕೇಳಿಕೊಂಡರೂ ಆತ ಅವರ ಮಾತು ಕೇಳಿರಲಿಲ್ಲ. ಈ ವೇಳೆ ನಟಿ ತಂದೆ ಆತನನ್ನು ಹಿಡಿಯಲು ಮುಂದಾಗಿದ್ದಾರೆ. ಈ ವೇಳೆ ಆತ  ತನ್ನಲ್ಲಿದ್ದ ಚಾಕುವಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಅಷ್ಟರಲ್ಲಿ, ನೆರೆಹೊರೆಯವರು ಮತ್ತು ಇತರರು ಆ ವ್ಯಕ್ತಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಕೆಲವರು ಆತನ ಮೇಲೆ ಖಾರದ ಪುಡಿ ಎರಚಿ ಹಿಡಿದಿದ್ದಾರೆ.

ಇದಾದ ಕೆಲವೇ ಕ್ಷಣಗಳಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಆತನನ್ನು ಬಂಧಿಸಿದ್ದಾರೆ. ಬಳಿಕ ಅತನನ್ನು ಪರಿಶೀಲಿಸಲಾಗಿದ್ದು, ಆತನ ಬಳಿ ಚಾಕು ಮತ್ತು ಮೆಣಸಿನ ಕಾಯಿ ಪುಡಿ ಇರುವುದು ಪತ್ತೆಯಾಗಿದೆ. ಅಲ್ಲದೆ ಆತ ಸೊನಾಲಿ ಅಭಿಮಾನಿ ಎಂಬ ಮಾತು ಕೂಡ ಶಂಕಿಸುವಂತಾಗಿದೆ. ನಿಜಕ್ಕೂ ಆತ ನಟಿಯನ್ನು  ನೋಡಲು ಬಂದಿದ್ದನೇ ಎಂಬುದು ಇದೀಗ ಪ್ರಶ್ನೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಇತ್ತೀಚೆಗಷ್ಟೇ ನಟಿ ಸೊನಾಲಿ ಕುಲಕರ್ಣಿ ಅವರು ದುಬೈನಲ್ಲಿ ಉದ್ಯಮಿ ಕುನಾಲ್ ಬೆನೋದೇಕರ್ ​​ಅವರನ್ನು ವಿವಾಹವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT