ನರೇಂದ್ರ ಮೋದಿ 
ದೇಶ

ಕೊರೊನಾ ಎದುರಿಸಲು ಲಸಿಕೆ ಅತ್ಯಾವಶ್ಯಕ, ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ ವಿಜ್ಞಾನಿಗಳ ಕುರಿತು ನಮಗೆ ಹೆಮ್ಮೆ ಇದೆ: ಪ್ರಧಾನಿ ಮೋದಿ

ಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬುದ್ಧಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ ‘ವರ್ಚುವಲ್‌ ವೆಸಾಕ್‌ ಗ್ಲೋಬಲ್‌ ಸೆಲೆಬ್ರೇಷನ್‌’ ಕಾರ್ಯಕ್ರಮದಲ್ಲಿ ವೀಡಿಯೊ ಕಾನ್ಪೆರೆನ್ಸ್ ಮೂಲಕ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತು ಶತಮಾನಗಳಲ್ಲಿ ಈ ರೀತಿಯ ಸಾಂಕ್ರಾಮಿಕವನ್ನು ಕಂಡಿಲ್ಲ. ಆದರೆ, ಈಗ  ಸಾಂಕ್ರಾಮಿಕದ ಬಗ್ಗೆ ಮೊದಲಿಗಿಂತ ಹೆಚ್ಚಿನ ತಿಳುವಳಿಕೆ ಇದೆ. ಕೊರೊನಾ ವಿರುದ್ಧದ ಹೋರಾಟ ಮತ್ತು ಜೀವಗಳನ್ನು ಉಳಿಸಲು ಲಸಿಕೆಯು ಬಹಳ ಮಹತ್ವದಾಗಿದೆ. ಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ  ನಮಗೆ ಅತೀವ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ, ಸಾಂಕ್ರಾಮಿಕದಿಂದಾಗಿ ತಮ್ಮ ಹತ್ತಿರದವರನ್ನು ಕಳೆದುಕೊಂಡವರಿಗೆ ಸಂತಾ‍ಪ ಸೂಚಿಸಿದರು. ಕೊರೋನಾದಿಂದಾಗಿ ತಮ್ಮವರನ್ನು ಕಳೆದುಕೊಂಡವರ ನೋವಿನಲ್ಲಿ ತಾನೂ ಭಾಗಿಯಾಗುತ್ತೇನೆ ಎಂದು ಹೇಳಿದರು. ಅಂತೆಯೇ 'ಕೊರೋನಾ ಸಾಂಕ್ರಾಮಿಕ ರೋಗವು ಮಾನವರು  ಎದುರಿಸುತ್ತಿರುವ ಭೀಕರ ಬಿಕ್ಕಟ್ಟು. ಸಾಂಕ್ರಾಮಿಕ ರೋಗವು ಪ್ರತಿ ದೇಶದ ಮೇಲೆ ಪರಿಣಾಮ ಬೀರಿದೆ. ಕೊರೋನಾ ಇಡೀ ವಿಶ್ವವನ್ನೇ ಬದಲಿಸಿಬಿಟ್ಟಿದೆ. ಕೊರೋನಾ ನಂತರ ಈ ಜಗತ್ತು ಮೊದಲಿನಂತೆ ಇರುವುದಿಲ್ಲ. ಭವಿಷ್ಯದಲ್ಲಿ ನಡೆಯಲಿರುವ ಘಟನೆಗಳನ್ನು ಕೋವಿಡ್‌ ಪೂರ್ವ ಅಥವಾ ಕೋವಿಡ್‌ ನಂತರದ  ಘಟನೆಗಳು ಎಂದು ನೆನಪಿಸಲಾಗುತ್ತದೆ ಎಂದು ಹೇಳಿದರು.

'ಭಾರತ ಈ ಸವಾಲನ್ನು ಅತ್ಯಂತ ಧೈರ್ಯದಿಂದ ಎದುರಿಸುತ್ತಿದ್ದು, ಇದರಲ್ಲಿ ಲಸಿಕೆಗಳ ಪಾತ್ರ ಮಹತ್ವದ್ದಾಗಿದೆ. ಕೋವಿಡ್-19 ಮಾನವೀಯತೆ ಎದುರಿಸುತ್ತಿರುವ ಅತ್ಯಂತ ಭೀಕರ ಬಿಕ್ಕಟ್ಟು. ಈ ಹಿಂದೆ ಇಂಥಹ ಸಾಂಕ್ರಾಮಿಕ ರೋಗವನ್ನು ನಾವೆಂದೂ ಕಂಡಿರಲಿಲ್ಲ, ಈ ಸಾಂಕ್ರಾಮಿಕದ ಬಗ್ಗೆ ಜನರಿಗೆ ಈಗ ತಿಳುವಳಿಕೆ  ಬಂದಿದೆ. ನಮ್ಮಲ್ಲಿ ಲಸಿಕೆಗಳು ಲಭ್ಯವಿದೆ. ಜನರ ಜೀವ ಉಳಿಸುವಲ್ಲಿ ಮತ್ತು ಸಾಂಕ್ರಾಮಿಕ ರೋಗವನ್ನು ಸೋಲಿಸುವಲ್ಲಿ ಈ ಲಸಿಕೆಗಳು ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಲಸಿಕೆಗಳ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ ನಮ್ಮ ವಿಜ್ಞಾನಿಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ ಎಂದು ಮೋದಿ ಹೇಳಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT