ಆರೋಗ್ಯ ಕಾರ್ಯಕರ್ತೆ 
ದೇಶ

ವಿಲಕ್ಷಣ ಆದೇಶ: ಛತ್ತೀಸ್ ಗಢದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಸಂಬಳವಿಲ್ಲ!

ಛತ್ತೀಸ್ ಗಢದಲ್ಲಿ ರಾಯಪುರದಿಂದ 160 ಕಿ.ಮೀ ದೂರದಲ್ಲಿರುವ ಗೌರೆಲ್ಲಾ- ಪೆಂಡ್ರಾ-ಮಾರ್ವಾಹಿ ಜಿಲ್ಲೆಯ ಬುಡುಕಟ್ಟ ಇಲಾಖೆ, ತನ್ನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ  ಕೋವಿಡ್ ವಿರುದ್ಧದ ಲಸಿಕೆ ಪಡೆಯಬೇಕು, ಇಲ್ಲದಿದ್ದರೆ ಜೂನ್ ತಿಂಗಳ ಸಂಬಳ ಪಡೆಯದಿರಲು ಬದ್ಧರಾಗುವಂತೆ ಹೇಳಿದೆ.

ರಾಯಪುರ: ಕೊರೋನಾವೈರಸ್ ಎರಡನೇ ಅಲೆ ನಡುವೆ ಛತ್ತೀಸ್ ಗಢದಲ್ಲಿ ವಿಲಕ್ಷಣ ಆದೇಶವೊಂದನ್ನು ಹೊರಡಿಸಲಾಗಿದೆ.
ರಾಯಪುರದಿಂದ 160 ಕಿ.ಮೀ ದೂರದಲ್ಲಿರುವ ಗೌರೆಲ್ಲಾ- ಪೆಂಡ್ರಾ-ಮಾರ್ವಾಹಿ ಜಿಲ್ಲೆಯ ಬುಡುಕಟ್ಟ ಇಲಾಖೆ, ತನ್ನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ  ಕೋವಿಡ್ ವಿರುದ್ಧದ ಲಸಿಕೆ ಪಡೆಯಬೇಕು, ಇಲ್ಲದಿದ್ದರೆ ಜೂನ್ ತಿಂಗಳ ಸಂಬಳ ಪಡೆಯದಿರಲು ಬದ್ಧರಾಗುವಂತೆ ಹೇಳಿದೆ.

ನೌಕರರು ಆದಷ್ಟು ಬೇಗ ತಮ್ಮ ಕೋವಿಡ್ ವ್ಯಾಕ್ಸಿನೇಷನ್ ಕಾರ್ಡ್ ನ್ನು  ಜಿಲ್ಲಾಧಿಕಾರಿಗಳ ಬುಡಕಟ್ಟು ವಿಭಾಗದಲ್ಲಿ ದಾಖಲೆಗಳಿಗಾಗಿ ಹಾಜರುಪಡಿಸುವಂತೆ  ಕೋರಲಾಗಿದೆ. ಒಂದು ವೇಳೆ ಲಸಿಕೆ ಪಡೆಯದಿರುವುದು ಕಂಡುಬಂದರೆ, ಜೂನ್ ತಿಂಗಳ ಸಂಬಳವನ್ನು ಸ್ಥಗಿತಗೊಳಿಸಲಾಗುವುದು, ಅದಕ್ಕೆ ಅವರೇ ಹೊಣೆಗಾರರಾಗುತ್ತಾರೆ. ಕೂಡಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಬುಡಕಟ್ಟು ಅಭಿವೃದ್ಧಿ ಇಲಾಖೆ ಸಹಾಯಕ ಆಯುಕ್ತ ಕೆ.ಎಸ್. ಮಸ್ರಾಮ್ ಸೋಮವಾರ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಮಸ್ರಾಮ್, ಯಾವುದೇ ಸರ್ಕಾರಿ ಸಿಬ್ಬಂದಿಯನ್ನು ಹೆದರಿಸುವ ಉದ್ದೇಶವಿಲ್ಲ ಆದರೆ, ನಮ್ಮ ಗುರಿ ಲಸಿಕೆ ನೀಡುವಿಕೆಯಲ್ಲಿ ಶೇಕಡ 100 ರಷ್ಟು ಪ್ರಗತಿ ಸಾಧಿಸುವುದಾಗಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT