ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿನ ಕೋವಿಡ್ ಸಾವುಗಳ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರ ರಹಿತ, ತಪ್ಪು: ಕೇಂದ್ರ ಸರ್ಕಾರ

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ

ನವದೆಹಲಿ: ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ  ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ. ದೇಶದಲ್ಲಿ ಕೋವಿಡ್-19 ಎರಡನೇ ಅಲೆಯೂ ಕುಸಿಯುತ್ತಿರುವುದನ್ನು  ಉಲ್ಲೇಖಿಸಿದೆ.

ದೇಶದಲ್ಲಿನ ಕೋವಿಡ್-19 ಸಾವಿನ ಅಂದಾಜು ಕುರಿತ ಇತ್ತೀಚಿನ ನ್ಯೂಯಾರ್ಕ್ ಟೈಮ್ಸ್ ವರದಿ ಸಂಪೂರ್ಣವಾಗಿ ನಿರಾಧಾರ ಮತ್ತು ತಪ್ಪಿನಿಂದ ಕೂಡಿದೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಯಾವುದೇ ಪುರಾವೆಗಳು ಬೆಂಬಲಿಸುವುದಿಲ್ಲ ಮತ್ತು ವಿಕೃತ ಅಂದಾಜುಗಳ ಮೇಲಿನ ವರದಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ನಾವು ಕೋವಿಡ್-19 ಎರಡನೇ ಅಲೆಯ ಕುಸಿತದಲ್ಲಿದ್ದು, ನಿರ್ಬಂಧಗಳು ಗಮನಾರ್ಹವಾಗಿ ಸಡಿಲಗೊಂಡರೂ ಕುಸಿತ ಇರಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಚಿವಾಲಯ ಹೇಳಿದೆ.

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿದೆ. ಕೋವಿಡ್-19 ಪರೀಕ್ಷೆಯಲ್ಲಿ ಹೆಚ್ಚಳವಾಗಿದ್ದು, ವಾರದ ಕೋವಿಡ್-19 ಪಾಸಿಟಿವಿಟಿ ದರದಲ್ಲಿ ಕಳೆದ ಮೂರು ವಾರಗಳಿಂದಲೂ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ, ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಅಸಂಭವವಾಗಿದೆ, ಆದರೆ ಈ ನಿಟ್ಟಿನಲ್ಲಿ  ನಮಗೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT