ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿನ ಕೋವಿಡ್ ಸಾವುಗಳ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರ ರಹಿತ, ತಪ್ಪು: ಕೇಂದ್ರ ಸರ್ಕಾರ

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ

ನವದೆಹಲಿ: ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ  ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ. ದೇಶದಲ್ಲಿ ಕೋವಿಡ್-19 ಎರಡನೇ ಅಲೆಯೂ ಕುಸಿಯುತ್ತಿರುವುದನ್ನು  ಉಲ್ಲೇಖಿಸಿದೆ.

ದೇಶದಲ್ಲಿನ ಕೋವಿಡ್-19 ಸಾವಿನ ಅಂದಾಜು ಕುರಿತ ಇತ್ತೀಚಿನ ನ್ಯೂಯಾರ್ಕ್ ಟೈಮ್ಸ್ ವರದಿ ಸಂಪೂರ್ಣವಾಗಿ ನಿರಾಧಾರ ಮತ್ತು ತಪ್ಪಿನಿಂದ ಕೂಡಿದೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಯಾವುದೇ ಪುರಾವೆಗಳು ಬೆಂಬಲಿಸುವುದಿಲ್ಲ ಮತ್ತು ವಿಕೃತ ಅಂದಾಜುಗಳ ಮೇಲಿನ ವರದಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ನಾವು ಕೋವಿಡ್-19 ಎರಡನೇ ಅಲೆಯ ಕುಸಿತದಲ್ಲಿದ್ದು, ನಿರ್ಬಂಧಗಳು ಗಮನಾರ್ಹವಾಗಿ ಸಡಿಲಗೊಂಡರೂ ಕುಸಿತ ಇರಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಚಿವಾಲಯ ಹೇಳಿದೆ.

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿದೆ. ಕೋವಿಡ್-19 ಪರೀಕ್ಷೆಯಲ್ಲಿ ಹೆಚ್ಚಳವಾಗಿದ್ದು, ವಾರದ ಕೋವಿಡ್-19 ಪಾಸಿಟಿವಿಟಿ ದರದಲ್ಲಿ ಕಳೆದ ಮೂರು ವಾರಗಳಿಂದಲೂ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ, ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಅಸಂಭವವಾಗಿದೆ, ಆದರೆ ಈ ನಿಟ್ಟಿನಲ್ಲಿ  ನಮಗೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT