ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿನ ಕೋವಿಡ್ ಸಾವುಗಳ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರ ರಹಿತ, ತಪ್ಪು: ಕೇಂದ್ರ ಸರ್ಕಾರ

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ

ನವದೆಹಲಿ: ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ  ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ. ದೇಶದಲ್ಲಿ ಕೋವಿಡ್-19 ಎರಡನೇ ಅಲೆಯೂ ಕುಸಿಯುತ್ತಿರುವುದನ್ನು  ಉಲ್ಲೇಖಿಸಿದೆ.

ದೇಶದಲ್ಲಿನ ಕೋವಿಡ್-19 ಸಾವಿನ ಅಂದಾಜು ಕುರಿತ ಇತ್ತೀಚಿನ ನ್ಯೂಯಾರ್ಕ್ ಟೈಮ್ಸ್ ವರದಿ ಸಂಪೂರ್ಣವಾಗಿ ನಿರಾಧಾರ ಮತ್ತು ತಪ್ಪಿನಿಂದ ಕೂಡಿದೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಯಾವುದೇ ಪುರಾವೆಗಳು ಬೆಂಬಲಿಸುವುದಿಲ್ಲ ಮತ್ತು ವಿಕೃತ ಅಂದಾಜುಗಳ ಮೇಲಿನ ವರದಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

ನಾವು ಕೋವಿಡ್-19 ಎರಡನೇ ಅಲೆಯ ಕುಸಿತದಲ್ಲಿದ್ದು, ನಿರ್ಬಂಧಗಳು ಗಮನಾರ್ಹವಾಗಿ ಸಡಿಲಗೊಂಡರೂ ಕುಸಿತ ಇರಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಚಿವಾಲಯ ಹೇಳಿದೆ.

ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿದೆ. ಕೋವಿಡ್-19 ಪರೀಕ್ಷೆಯಲ್ಲಿ ಹೆಚ್ಚಳವಾಗಿದ್ದು, ವಾರದ ಕೋವಿಡ್-19 ಪಾಸಿಟಿವಿಟಿ ದರದಲ್ಲಿ ಕಳೆದ ಮೂರು ವಾರಗಳಿಂದಲೂ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ, ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಅಸಂಭವವಾಗಿದೆ, ಆದರೆ ಈ ನಿಟ್ಟಿನಲ್ಲಿ  ನಮಗೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ