ದೇಶ

ಪಂಜಾಬ್ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಸೋನಿಯಾ

Nagaraja AB

ನವದೆಹಲಿ: ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಮಾಜಿ ಸಂಪುಟ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವಿನ ಬಹಿರಂಗ ವಾಕ್ ಸಮರದ ನಡುವೆ ಪಂಜಾಬ್ ನಲ್ಲಿನ ತನ್ನ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ರಚಿಸಿದ್ದಾರೆ.

ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿನ ಈ ಸಮಿತಿಯಲ್ಲಿ ಪಂಜಾಬ್ ಉಸ್ತುವಾರಿ ಎಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್, ಮತ್ತು ಜೆ.ಪಿ. ಅಗರ್ ವಾಲ್ ಇದ್ದು, ಶನಿವಾರ ಬೆಳಗ್ಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ.

2022ರ ವಿಧಾನಸಭಾ ಚುನಾವಣೆ ಮುಂದಿರುವಂತೆಯೇ ಪಂಜಾಬ್ ಕಾಂಗ್ರೆಸ್ ಘಟಕದೊಳಗಿನ ಬಣವಾದ ಮತ್ತು ಆಂತರಿಕ ಪೈಪೋಟಿಯ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ. ಕಳೆದ ರಾತ್ರಿ ಸೋನಿಯಾ ಗಾಂಧಿ ಈ ಸಮಿತಿ ರಚಿಸಿದ್ದಾರೆ ಆದರೆ, ಸಾರ್ವಜನಿಕವಾಗಿ ಬಹಿರಂಗಗೊಳಿಸಿಲ್ಲ ಎಂದು ಮೂಲಗಳು ಹೇಳಿವೆ.

ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಹರೀಶ್ ರಾವತ್, ಪಕ್ಷ ಬಲಪಡಿಸುವಿಕೆ ಮತ್ತು ಪಂಜಾಬ್ ನಲ್ಲಿನ ಪಕ್ಷದ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸುವುದು ಸಮಿತಿಯ ಕಾರ್ಯವಾಗಿದೆ ಎಂದು ತಿಳಿಸಿದ್ದಾರೆ. ತನ್ನ ಉದ್ದೇಶವನ್ನು ಪೂರ್ಣಗೊಳಿಸಲು ಯಾವ ರೀತಿಯ ಕಾರ್ಯತಂತ್ರ ಅನುಸರಿಸಬೇಕು ಎಂಬುದರ ಬಗ್ಗೆ ನಾಳೆ ಮೂವರು ನಾಯಕರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸುತ್ತಿರುವುದಾಗಿ ಅವರು ಹೇಳಿದರು.

SCROLL FOR NEXT