ಸೋನಿಯಾ ಗಾಂಧಿ 
ದೇಶ

ಪಂಜಾಬ್ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಸೋನಿಯಾ

ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಮಾಜಿ ಸಂಪುಟ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವಿನ ಬಹಿರಂಗ ವಾಕ್ ಸಮರದ ನಡುವೆ ಪಂಜಾಬ್ ನಲ್ಲಿನ ತನ್ನ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ರಚಿಸಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಮಾಜಿ ಸಂಪುಟ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವಿನ ಬಹಿರಂಗ ವಾಕ್ ಸಮರದ ನಡುವೆ ಪಂಜಾಬ್ ನಲ್ಲಿನ ತನ್ನ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ರಚಿಸಿದ್ದಾರೆ.

ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿನ ಈ ಸಮಿತಿಯಲ್ಲಿ ಪಂಜಾಬ್ ಉಸ್ತುವಾರಿ ಎಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್, ಮತ್ತು ಜೆ.ಪಿ. ಅಗರ್ ವಾಲ್ ಇದ್ದು, ಶನಿವಾರ ಬೆಳಗ್ಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ.

2022ರ ವಿಧಾನಸಭಾ ಚುನಾವಣೆ ಮುಂದಿರುವಂತೆಯೇ ಪಂಜಾಬ್ ಕಾಂಗ್ರೆಸ್ ಘಟಕದೊಳಗಿನ ಬಣವಾದ ಮತ್ತು ಆಂತರಿಕ ಪೈಪೋಟಿಯ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ. ಕಳೆದ ರಾತ್ರಿ ಸೋನಿಯಾ ಗಾಂಧಿ ಈ ಸಮಿತಿ ರಚಿಸಿದ್ದಾರೆ ಆದರೆ, ಸಾರ್ವಜನಿಕವಾಗಿ ಬಹಿರಂಗಗೊಳಿಸಿಲ್ಲ ಎಂದು ಮೂಲಗಳು ಹೇಳಿವೆ.

ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಹರೀಶ್ ರಾವತ್, ಪಕ್ಷ ಬಲಪಡಿಸುವಿಕೆ ಮತ್ತು ಪಂಜಾಬ್ ನಲ್ಲಿನ ಪಕ್ಷದ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸುವುದು ಸಮಿತಿಯ ಕಾರ್ಯವಾಗಿದೆ ಎಂದು ತಿಳಿಸಿದ್ದಾರೆ. ತನ್ನ ಉದ್ದೇಶವನ್ನು ಪೂರ್ಣಗೊಳಿಸಲು ಯಾವ ರೀತಿಯ ಕಾರ್ಯತಂತ್ರ ಅನುಸರಿಸಬೇಕು ಎಂಬುದರ ಬಗ್ಗೆ ನಾಳೆ ಮೂವರು ನಾಯಕರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸುತ್ತಿರುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT