ಸಾಂದರ್ಭಿಕ ಚಿತ್ರ 
ದೇಶ

ನಾರದ ರಹಸ್ಯ ಕಾರ್ಯಾಚರಣೆ ಕೇಸು: ನಾಲ್ಕು ಟಿಎಂಸಿ ನಾಯಕರಿಗೆ ಕೋಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು 

ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಕೋಲ್ಕತ್ತಾ: ನಾರದ ಸುದ್ದಿವಾಹಿನಿ ರಹಸ್ಯ ಕಾರ್ಯಾಚರಣೆ ಕೇಸಿನಲ್ಲಿ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ ಮತ್ತು ಇಬ್ಬರು ಶ್ಯೂರಿಟಿಗಳ ಷರತ್ತುಗಳೊಂದಿಗೆ ಕೋಲ್ಕತ್ತಾ ಹೈಕೋರ್ಟ್ ಟಿಎಂಸಿ ನಾಯಕರಾದ ಫಿರ್ಹಾದ್ ಹಕಿಮ್, ಸುಬ್ರತ ಮುಖರ್ಜಿ, ಮದನ್ ಮಿತ್ರ ಮತ್ತು ಸೋವನ್ ಚಟರ್ಜಿ ಅವರಿಗೆ  ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 

ಮುಂದಿನ ದಿನಗಳಲ್ಲಿ ಹೈಕೋರ್ಟ್ ಸೂಚಿಸಿದಾಗಲೆಲ್ಲಾ ಈ ನಾಲ್ವರು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕೆಂದು ಕೂಡ ಹೈಕೋರ್ಟ್ ಸೂಚಿಸಿದೆ. ನಾರದಾ ಕೇಸಿನ ಬಾಕಿ ಉಳಿದಿರುವ ವಿಚಾರಣೆ ಇರುವುದರಿಂದ ಮುಂದಿನ ದಿನಗಳಲ್ಲಿ ಈ ನಾಲ್ವರು ಟಿಎಂಸಿ ನಾಯಕರು ಮಾಧ್ಯಮಗಳಿಗೆ ಸಂದರ್ಶನ ಕೂಡ ನೀಡಬಾರದು ಎಂದು ಕೂಡ ಹೈಕೋರ್ಟ್ ಷರತ್ತು ವಿಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT