ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ 
ದೇಶ

ದುರಂಹಕಾರಿ, ಸೊಕ್ಕಿನ', ಮಮತಾ ಬ್ಯಾನರ್ಜಿ ಪ್ರಧಾನಿಯನ್ನು 30 ನಿಮಿಷ ಕಾಯಿಸಿದರು: ಕೇಂದ್ರ ಸರ್ಕಾರ

ಯಾಸ್ ಚಂಡಮಾರುತದ ಪರಿಣಾಮದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಇಂದಿನ ಸಭೆಗೆ ಪಶ್ಚಿಮ ಬಂಗಾಳ  ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ಗೈರಾದರು. ಬದಲಿಗೆ ವಾಯುನೆಲೆಯಲ್ಲಿ ಪ್ರಧಾನಿಯೊಂದಿಗೆ ತರಾತುರಿಯಲ್ಲಿ 15 ನಿಮಿಷ ಸಂವಾದ ನಡೆಸಿದರು.

ನವದೆಹಲಿ: ಯಾಸ್ ಚಂಡಮಾರುತದ ಪರಿಣಾಮದಿಂದಾದ ಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಇಂದಿನ ಸಭೆಗೆ ಪಶ್ಚಿಮ ಬಂಗಾಳ  ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ಗೈರಾದರು. ಬದಲಿಗೆ ವಾಯುನೆಲೆಯಲ್ಲಿ ಪ್ರಧಾನಿಯೊಂದಿಗೆ ತರಾತುರಿಯಲ್ಲಿ 15 ನಿಮಿಷ ಸಂವಾದ ನಡೆಸಿದರು. ಪ್ರಧಾನಿ ಯೊಂದಿಗಿನ ಚಂಡಮಾರುತ ಹಾನಿ ಪರಾಮರ್ಶನಾ ಸಭೆಯಲ್ಲಿ ಮಮತಾ ಪಾಲ್ಗೊಳ್ಳಬೇಕಿತ್ತು. ಆದರೆ. ವರದಿ ಕೊಟ್ಟ ನಂತರ ಅವರು ಹೊರಟೇ ಬಿಟ್ಟರು.

ನೀವು ನನ್ನನ್ನು ಭೇಟಿಯಾಗಲು ಬಯಸಿದ್ದರಿಂದ ಇಂದು ಬಂದೆ. ನಾನು ಮತ್ತು ನನ್ನ ಮುಖ್ಯ ಕಾರ್ಯದರ್ಶಿ ಈ ವರದಿಯನ್ನು ಸಲ್ಲಿಸಿದ್ದೇವೆ. ಈಗ ದಿಘಾದಲ್ಲಿ ಸಭೆ ಇದ್ದು, ಇಲ್ಲಿಂದ ಹೊರಡಲು ನಿಮ್ಮ ಅನುಮತಿ ಬೇಕಾಗಿದೆ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ. ಬಂಗಾಳ ಚುನಾವಣೆ ಪ್ರಚಾರದ ನಂತರ ಇದು ಅವರಿಬ್ಬರ ಮೊದಲ ಮುಖಾಮುಖಿ ಭೇಟಿಯಾಗಿತ್ತು.

ಯಾಸ್ ಚಂಡುಮಾರುತದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲು ಕಲಾಯಿಕುಂಡ್ ವಾಯುನೆಲೆಗೆ ಪ್ರಧಾನಿ ಆಗಮಿಸಿದಾಗ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಮತ್ತು ರಾಜ್ಯಪಾಲ ಜಗದೀಪ್ ಧಾಂಕರ್ ಅವರನ್ನು ಅರ್ಧ ಗಂಟೆಗಳ ಕಾಲ ಕಾಯಿಸಿದ್ದಾರೆ ಎಂದು ಸರ್ಕಾರ ಆರೋಪಿಸಿದೆ.

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಚಂಡುಮಾರುತದಿಂದ ಆದ ಹಾನಿ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಪ್ರಧಾನಿ ಮೋದಿ ಬಂಗಾಳದ ಕಲಾಯಿಕುಂಡ್ ವಾಯುನೆಲೆಗೆ ಬಂದಾಗ, ಮಮತಾ ಬ್ಯಾನರ್ಜಿ ಕಾಯಿಸಿರುವುದಾಗಿ ಹೇಳಲಾಗಿದೆ. 

ಬ್ಯಾನರ್ಜಿ ತನ್ನ ಸಭೆಯ ಬಗ್ಗೆ ಕೇಂದ್ರಕ್ಕೆ ತಿಳಿಸಿದ್ದರು.ಆದರೆ. ಅವರನ್ನು ವಾಯುನೆಲೆಯಲ್ಲಿ ಪ್ರಧಾನಿಯವರಿಗಾಗಿ ಕಾಯುವಂತೆ ಮಾಡಲಾಗಿತ್ತು. ಇದು ಅವರನ್ನು ಕುಪಿತರನ್ನಾಗಿಸಿತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಚೇರಿ ತಿಳಿಸಿದೆ.

ಧಾಂಕರ್ ಅವರು ಟ್ವಿಟಿಸಿರುವ ಚಿತ್ರದಲ್ಲಿ ಪರಿಶೀಲನಾ ಸಭೆಯ ಆರಂಭಕ್ಕೆ ಮುನ್ನ ಮೋದಿ ಅವರು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಕುಳಿತಿದ್ದರೆ, ಅವರ ಬಲಭಾಗದಲ್ಲಿಯ ಖುರ್ಚಿಗಳು ಖಾಲಿ ಇರುವುದನ್ನು ತೋರಿಸಿದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿಯೂ ಬ್ಯಾನರ್ಜಿ ಅವರ ಇಂತಹ ವರ್ತನೆ ವಿಷಾದನೀಯವಾಗಿದೆ ಮತ್ತು ಕೆಳ ದರ್ಜೆಯ ರಾಜಕೀಯದ ಸಂಕೇತವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಮೋದಿ ಪರಿಶೀಲನಾ ಸಭೆಗೆ ಆಗಮಿಸಿದಾಗ ಪ. ಬಂಗಾಳ ಸರ್ಕಾರದ ಯಾರೂ ಅಲ್ಲಿರಲಿಲ್ಲ. ಬ್ಯಾನರ್ದಿ ಮತ್ತು ಮುಖ್ಯ ಕಾರ್ಯದರ್ಶಿ ಅದೇ ಅವರಣದಲ್ಲಿದ್ದರೂ ಪ್ರಧಾನಿ ಅವರನ್ನು ಬರಮಾಡಿಕೊಳ್ಳಲು ಬಂದಿರಲಿಲ್ಲ ಎಂದಿರುವ ಕೇಂದ್ರ ಸರ್ಕಾರದ ಮೂಲಕಗಳು, ದಿಢೀರನೇ ಸಭಾಂಗಣವನ್ನು ಪ್ರವೇಶಿಸಿದ ಬ್ಯಾನರ್ಜಿ ಚಂಡಮಾರುತದಿಂದ ಹಾನಿಯ ಕುರಿತು ಕೆಲವು ದಾಖಲೆಗಳನ್ನು ನೀಡಿ, ತನಗೆ ಇತರ ಕಾರ್ಯಕ್ರಮಗಳು ಇವೆ ಎಂದು ತಿಳಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಭಾರತೀಯ ಗಣರಾಜ್ಯದ ಇತಿಹಾಸದಲ್ಲಿಯೇ ರಾಜ್ಯವೊಂದರ ಮುಖ್ಯಮಂತ್ರಿ ಪ್ರಧಾನಿ ಮತ್ತು ರಾಜ್ಯಪಾಲರಂತಹ ಉನ್ನತ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಜೊತೆಗೆ ಇಷ್ಟೊಂದು ಕೆಟ್ಟದಾಗಿ, ಅಗೌರವಯುತವಾಗಿ ಮತ್ತು ದುರಂಕಾರದಿಂದ ನಡೆದುಕೊಂಡಿರಲಲಿಲ್ಲ ಎಂದಿವೆ.

ಪ್ರಧಾನಿಗಳ ಎದುರು ವರದಿಯನ್ನು ಮಂಡಿಸುವಾಗಲೂ ತನ್ನ ಅಧಿಕಾರಿಗಳಿಗೆ ಬ್ಯಾನರ್ಜಿ ಅವಕಾಶ ನೀಡಿರಲಿಲ್ಲಎಂದು ಮೂಲಗಳು ಹೇಳಿವೆ. ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ವಿಷಯ ಬ್ಯಾನರ್ಜಿ ಅವರಿಗೆ ಕಸಿವಿಸಿಯನ್ನುಂಟುಮಾಡಿತ್ತು ಎಂದು ಅವರು ತಿಳಿಸಿವೆ.

ಪರಾಮರ್ಶನಾ ಸಭೆ ಹಿನ್ನೆಲೆಯಲ್ಲಿ ಪ್ರಧಾನಿ ಜೊತೆಗೆ ಪ್ರತ್ಯೇಕ ಸಮಯ ಕೇಳಲಾಗಿತ್ತು. ಸಭೆ ಇರುವ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಎಲ್ಲಾದಕ್ಕೂ ಒಪ್ಪಲಾಗಿತ್ತು. ಆದರೆ ಏಕೆ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ಬಂಗಾಳ ಸರ್ಕಾರ ಪ್ರಶ್ನಿಸಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT