ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ 
ದೇಶ

ಯಾಸ್ ಚಂಡಮಾರುತ: ಉತ್ತರ 24 ಪರಗಣ ಜಿಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವೈಮಾನಿಕ ಸಮೀಕ್ಷೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಯಾಸ್ ಚಂಡಮಾರುತ ಪರಿಣಾಮ ಪ್ರವಾಹಕ್ಕೆ ತುತ್ತಾಗಿದ್ದ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಹಿಂಗಲ್ಗಂಜ್, ಹಸ್ನಾಬಾದ್, ಸಂದೇಶ್ಖಾಲಿ, ಪಿನಾಖಾ ಮತ್ತು ಇತರ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಮಮತಾ ಬ್ಯಾನರ್ಜಿ ಅವರೊಂದಿಗೆ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಸಾಥ್ ನೀಡಿದ್ದರು.  

ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ವ್ಯಾಪಕಾಗಿದೆ. ಹೆಚ್ಚಿನ ಪ್ರದೇಶಗಳು ಮುಳುಗಿರುವುದನ್ನು ನಾನು ನೋಡಿದ್ದೇನೆ. ಕೃಷಿ ಹೊಲಗಳ ಮನೆಗಳು ಮತ್ತು ದೊಡ್ಡ ಪ್ರದೇಶಗಳು ನೀರಿನ ಅಡಿಯಲ್ಲಿ ಸಿಲುಕಿವೆ. ಮುಂದಿನ ದಿನಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕ್ಷೇತ್ರ ಸಮೀಕ್ಷೆಯನ್ನೂ ನಡೆಸಲಾಗುವುದು ಎಂದು ಮಮತಾ ಬ್ಯಾನರ್ಜಿ ಹೇಳಿದರು. ಬಳಿಕ ಅವರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಆಡಳಿತಾತ್ಮಕ ಸಭೆ ನಡೆಸಿದರು.

ಯಾಸ್ ಚಂಡಮಾರುತದಿಂದಾಗಿ ಬಂಗಾಳದ ಪುರ್ಬಾ ಮದಿನಿಪುರ, ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಬುಧವಾರ ಬೆಳಿಗ್ಗೆ ನೆರೆಯ ಒಡಿಶಾದಲ್ಲಿ ಭೂಕುಸಿತವಾಗಿದೆ. ಚಂಡಮಾರುತದ ಜೊತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ಜಿಲ್ಲೆಗಳು ಪ್ರವಾಹದಲ್ಲಿ ಮುಳುಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT