ದೇಶ

ಕೋವಿಡ್: ಕೀನ್ಯಾದಿಂದ ಭಾರತಕ್ಕೆ 12 ಟನ್ ಆಹಾರೋತ್ಪನ್ನ ದೇಣಿಗೆ

ಆಫ್ರಿಕಾ ಖಂಡದ ಪ್ರಮುಖ ರಾಷ್ಟ್ರ ಕೀನ್ಯಾ ತನ್ನ ಕೋವಿಡ್-19 ಪರಿಹಾರ ಕಾರ್ಯಗಳ ಭಾಗವಾಗಿ ಭಾರತಕ್ಕೆ 12 ಟನ್ ಆಹಾರೋತ್ಪನ್ನಗಳನ್ನು ದೇಣಿಗೆ ನೀಡಿದೆ. 

ನವದೆಹಲಿ: ಆಫ್ರಿಕಾ ಖಂಡದ ಪ್ರಮುಖ ರಾಷ್ಟ್ರ ಕೀನ್ಯಾ ತನ್ನ ಕೋವಿಡ್-19 ಪರಿಹಾರ ಕಾರ್ಯಗಳ ಭಾಗವಾಗಿ ಭಾರತಕ್ಕೆ 12 ಟನ್ ಆಹಾರೋತ್ಪನ್ನಗಳನ್ನು ದೇಣಿಗೆ ನೀಡಿದೆ. 

ಪೂರ್ವ ಆಫ್ರಿಕಾ ರಾಷ್ಟ್ರ ಸ್ಥಳೀಯವಾಗಿ ಉತ್ಪಾದಿಸುವ 12 ಟನ್ ಚಹಾ, ಕಾಫಿ ಮತ್ತು ನೆಲಗಡಲೆಯನ್ನು ಭಾರತೀಯ ರೆಡ್‌ಕ್ರಾಸ್ ಸೊಸೈಟಿಗೆ ಕಳುಹಿಸಿದ್ದು, ಇದನ್ನು ಮಹಾರಾಷ್ಟ್ರದಾದ್ಯಂತ ವಿತರಿಸಲಾಗುವುದು ಎಂದು ಪ್ರಕಟಣೆ ಹೇಳಿದೆ.

"ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ನಮ್ಮ ಜನರು ಭಾರತ ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕೀನ್ಯಾ ಸರ್ಕಾರ ಬಯಸುತ್ತದೆ" ಎಂದು ಆಫ್ರಿಕನ್ ದೇಶದ ಹೈ ಕಮಿಷನರ್ ವಿಲ್ಲಿ ಬೆಟ್ ಹೇಳಿದ್ದಾರೆ.

ಆಹಾರೋತ್ಪನ್ನಗಳನ್ನು ಹಸ್ತಾಂತರಿಸಲು ನವದೆಹಲಿಯಿಂದ ಮುಂಬೈಗೆ ಬಂದ ಬೆಟ್, ಈ ದೇಣಿಗೆಯನ್ನು ಜೀವರಕ್ಷಣೆಗಾಗಿ ದೀರ್ಘಕಾಲ ಕೆಲಸ ಮಾಡುವ ಮುಂಚೂಣಿ ಕಾರ್ಯಕರ್ತರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!