ದೇಶ

ಕೋವಿಡ್: ಕೀನ್ಯಾದಿಂದ ಭಾರತಕ್ಕೆ 12 ಟನ್ ಆಹಾರೋತ್ಪನ್ನ ದೇಣಿಗೆ

ಆಫ್ರಿಕಾ ಖಂಡದ ಪ್ರಮುಖ ರಾಷ್ಟ್ರ ಕೀನ್ಯಾ ತನ್ನ ಕೋವಿಡ್-19 ಪರಿಹಾರ ಕಾರ್ಯಗಳ ಭಾಗವಾಗಿ ಭಾರತಕ್ಕೆ 12 ಟನ್ ಆಹಾರೋತ್ಪನ್ನಗಳನ್ನು ದೇಣಿಗೆ ನೀಡಿದೆ. 

ನವದೆಹಲಿ: ಆಫ್ರಿಕಾ ಖಂಡದ ಪ್ರಮುಖ ರಾಷ್ಟ್ರ ಕೀನ್ಯಾ ತನ್ನ ಕೋವಿಡ್-19 ಪರಿಹಾರ ಕಾರ್ಯಗಳ ಭಾಗವಾಗಿ ಭಾರತಕ್ಕೆ 12 ಟನ್ ಆಹಾರೋತ್ಪನ್ನಗಳನ್ನು ದೇಣಿಗೆ ನೀಡಿದೆ. 

ಪೂರ್ವ ಆಫ್ರಿಕಾ ರಾಷ್ಟ್ರ ಸ್ಥಳೀಯವಾಗಿ ಉತ್ಪಾದಿಸುವ 12 ಟನ್ ಚಹಾ, ಕಾಫಿ ಮತ್ತು ನೆಲಗಡಲೆಯನ್ನು ಭಾರತೀಯ ರೆಡ್‌ಕ್ರಾಸ್ ಸೊಸೈಟಿಗೆ ಕಳುಹಿಸಿದ್ದು, ಇದನ್ನು ಮಹಾರಾಷ್ಟ್ರದಾದ್ಯಂತ ವಿತರಿಸಲಾಗುವುದು ಎಂದು ಪ್ರಕಟಣೆ ಹೇಳಿದೆ.

"ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ನಮ್ಮ ಜನರು ಭಾರತ ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕೀನ್ಯಾ ಸರ್ಕಾರ ಬಯಸುತ್ತದೆ" ಎಂದು ಆಫ್ರಿಕನ್ ದೇಶದ ಹೈ ಕಮಿಷನರ್ ವಿಲ್ಲಿ ಬೆಟ್ ಹೇಳಿದ್ದಾರೆ.

ಆಹಾರೋತ್ಪನ್ನಗಳನ್ನು ಹಸ್ತಾಂತರಿಸಲು ನವದೆಹಲಿಯಿಂದ ಮುಂಬೈಗೆ ಬಂದ ಬೆಟ್, ಈ ದೇಣಿಗೆಯನ್ನು ಜೀವರಕ್ಷಣೆಗಾಗಿ ದೀರ್ಘಕಾಲ ಕೆಲಸ ಮಾಡುವ ಮುಂಚೂಣಿ ಕಾರ್ಯಕರ್ತರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚುನಾವಣೆಗೂ ಮುನ್ನ ಯೋಗಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ: ಸಂಪುಟ ಪುನಾರಚನೆ; 6 ಹೊಸ ಸಚಿವರ ಸೇರ್ಪಡೆ

IPL 2026: ನಿರ್ಣಾಯಕ ಪಂದ್ಯದಲ್ಲಿ ಲಖನೌ ವಿರುದ್ಧ ಗೆದ್ದ CSK; ಪ್ಲೇ ಆಫ್ ಕನಸು ಜೀವಂತ!

ಕೇರಳ ಸಿಎಂ ಆಯ್ಕೆ: ಕೆಸಿ ವೇಣುಗೋಪಾಲ್ ರಾಹುಲ್ ಗಾಂಧಿಯ ಆದ್ಯತೆ; ಕುತೂಹಲ ಮೂಡಿಸಿದ ಖಾಸಗಿ ಭೇಟಿ!

Tamil Nadu: 'ಡಿಎಂಕೆ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ': ಇಚ್ಛಾಶಕ್ತಿ ಬೇಕು ಎಂದ Stalin ಗೆ ಶಾಕ್ ಕೊಟ್ಟ ಸಿಎಂ ವಿಜಯ್

ಸಿಎಂ ಪದಗ್ರಹಣ ಕಾರ್ಯಕ್ರಮ: ಸೂಟ್ ಧರಿಸಿ 74 ವರ್ಷಗಳ ತಮಿಳು ಪರಂಪರೆ, ಸಂಪ್ರದಾಯ ಮುರಿದ ವಿಜಯ್!

SCROLL FOR NEXT