ದೇಶ

ಯಾಸ್ ಚಂಡಮಾರುತ: ಹಾನಿ ಕುರಿತು ಪ್ರಧಾನಿ ಮೋದಿಗೆ ವರದಿ ಸಲ್ಲಿಸಿದ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

Srinivasamurthy VN

ಕೋಲ್ಕತಾ: ಯಾಸ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿರುವ ಹಾನಿಯ ಕುರಿತು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ.

ಯಾಸ್ ಚಂಡಮಾರುತ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳದ ಪಶ್ಚಿಮ ಮೆದಿನಿಪುರ ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಂಡಮಾರುತದಿಂದಾಗಿ ರಾಜ್ಯದಲ್ಲಿ  ಸಂಭವಿಸಿರುವ ಹಾನಿಯ ಕುರಿತು ವರದಿ ಸಲ್ಲಿಕೆ ಮಾಡಿದ್ದಾರೆ.

ಈ ಸಭೆಗೂ ಮೊದಲು ಪ್ರಧಾನಿ ಮೋದಿ ಚಂಡಮಾರುತ ಪೀಡಿತ ಮತ್ತೊಂದು ರಾಜ್ಯ ಒಡಿಶಾಗೆ ತೆರಳಿ ಅಲ್ಲಿ ಚಂಡಮಾರುತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನಾ ಸಭೆ ನಡೆಸಿ ಮಾಹಿತಿ ಕಲೆಹಾಕಿದರು. ಕೇವಲ 15 ನಿಮಿಷಗಳಲ್ಲೇ ಈ ಎರಡೂ ಪರಿಶೀಲನಾ ಸಭೆಗಳು ಮುಕ್ತಾಯವಾಗಿದೆ ಎಂದು  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 

SCROLL FOR NEXT