ವಿದ್ಯಾರ್ಥಿಗಳು 
ದೇಶ

11ನೇ, 12ನೇ ತರಗತಿಯ ಆಂತರಿಕ ಪರೀಕ್ಷೆಗಳ ಸರಾಸರಿ ಅಂಕಗಳನ್ನು ಸಲ್ಲಿಸುವಂತೆ ಶಾಲಾ ಮಂಡಳಿಗಳಿಗೆ ಸಿಐಸಿಎಸ್ಇ ಸೂಚನೆ

11ನೇ ತರಗತಿಯ ಪರೀಕ್ಷೆ ಮತ್ತು 12ನೇ ತರಗತಿಯ ನಡೆದ ಆಂತರಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಸರಾಸರಿ ಸೇರಿದಂತೆ ದತ್ತಾಂಶವನ್ನು ಸಲ್ಲಿಸುವಂತೆ ಸಿಐಸಿಎಸ್ಇ ಮಂಡಳಿ ತನ್ನ ಅಂಗಸಂಸ್ಥೆ ಶಾಲಾ ಮಂಡಳಿಗಳಿಗೆ ಸೂಚಿಸಿದೆ.

ನವದೆಹಲಿ: 11ನೇ ತರಗತಿಯ ಪರೀಕ್ಷೆ ಮತ್ತು 12ನೇ ತರಗತಿಯ ನಡೆದ ಆಂತರಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಸರಾಸರಿ ಸೇರಿದಂತೆ ದತ್ತಾಂಶವನ್ನು ಸಲ್ಲಿಸುವಂತೆ ಸಿಐಸಿಎಸ್ಇ ಮಂಡಳಿ ತನ್ನ ಅಂಗಸಂಸ್ಥೆ ಶಾಲಾ ಮಂಡಳಿಗಳಿಗೆ ಸೂಚಿಸಿದೆ. 

ಕೊರೋನಾ ಎರಡನೇ ಅಲೆಯಿಂದಾಗಿ ಮೇ 4ಕ್ಕೆ ನಿಗದಿಯಾಗಿದ್ದ 12ನೇ ತರಗತಿ ಪರೀಕ್ಷೆಗಳನ್ನು ಮಂಡಳಿ ಮುಂದೂಡಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ ಆದರೆ ಮಂಡಳಿ ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಸಿಎಸ್ಇ) ಈಗಾಗಲೇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. "ಸಿಐಎಸ್ಸಿಇ 12ನೇ ತರಗತಿ ಪರೀಕ್ಷೆಗೆ ಹಾಜರುಪಡಿಸುವ ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹವನ್ನು ಆರಂಭಿಸಿದೆ. ಅಲ್ಲದೆ ಪ್ರಾಂಶುಪಾಲರನ್ನು ಕಟ್ಟುನಿಟ್ಟಾಗಿ ಗೌಪ್ಯತೆ ಕಾಪಾಡಿ ಎಂದು ಸೂಚಿಸಲಾಗಿದೆ ಎಂದು ಸಿಐಎಸ್ಸಿಇ ಕಾರ್ಯದರ್ಶಿ ಗೆರ್ರಿ ಅರಾಥೂನ್ ಶಾಲೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 

ಮಂಡಳಿಯು ಕೋರಿದ ಮಾಹಿತಿಯು 11ನೇ ತರಗತಿಯಲ್ಲಿ(2019-20) ಅಭ್ಯರ್ಥಿಗಳು ಗಳಿಸಿದ ವಿಷಯಗಳ ಸರಾಸರಿ ಅಂಕಗಳು ಮತ್ತು 12ನೇ ತರಗತಿಯಲ್ಲಿ(2020-21) ಶಾಲೆಯು ನಡೆಸಿದ ವಿವಿಧ ಪರೀಕ್ಷೆಗಳು ಮತ್ತು ಪರೀಕ್ಷೆಗಳಲ್ಲಿ ಗಳಿಸಿದ ವಿಷಯಗಳ ಸರಾಸರಿ ಅಂಕಗಳನ್ನು ಒಳಗೊಂಡಿದೆ.

ದತ್ತಾಂಶವನ್ನು ಅಪ್ಲೋಡ್ ಮಾಡುವ ಪ್ರಕ್ರಿಕೆಯನ್ನು ಪೂರ್ಣಗೊಳಿಸಲು ಅಂತಿಮ ದಿನಾಂಕವನ್ನು ಮಂಡಳಿಯು ಜೂನ್ 7ಕ್ಕೆ ನಿಗದಿಪಡಿಸಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಕೇಂದ್ರೀಯ ಪ್ರೌಡಶಾಲಾ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಇನ್ನೂ ಅಂತಿಮ ಕರೆ ನೀಡಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವಾಲಯವು ಜೂನ್ 1 ರೊಳಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT