ವಿದ್ಯಾರ್ಥಿಗಳು 
ದೇಶ

11ನೇ, 12ನೇ ತರಗತಿಯ ಆಂತರಿಕ ಪರೀಕ್ಷೆಗಳ ಸರಾಸರಿ ಅಂಕಗಳನ್ನು ಸಲ್ಲಿಸುವಂತೆ ಶಾಲಾ ಮಂಡಳಿಗಳಿಗೆ ಸಿಐಸಿಎಸ್ಇ ಸೂಚನೆ

11ನೇ ತರಗತಿಯ ಪರೀಕ್ಷೆ ಮತ್ತು 12ನೇ ತರಗತಿಯ ನಡೆದ ಆಂತರಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಸರಾಸರಿ ಸೇರಿದಂತೆ ದತ್ತಾಂಶವನ್ನು ಸಲ್ಲಿಸುವಂತೆ ಸಿಐಸಿಎಸ್ಇ ಮಂಡಳಿ ತನ್ನ ಅಂಗಸಂಸ್ಥೆ ಶಾಲಾ ಮಂಡಳಿಗಳಿಗೆ ಸೂಚಿಸಿದೆ.

ನವದೆಹಲಿ: 11ನೇ ತರಗತಿಯ ಪರೀಕ್ಷೆ ಮತ್ತು 12ನೇ ತರಗತಿಯ ನಡೆದ ಆಂತರಿಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಸರಾಸರಿ ಸೇರಿದಂತೆ ದತ್ತಾಂಶವನ್ನು ಸಲ್ಲಿಸುವಂತೆ ಸಿಐಸಿಎಸ್ಇ ಮಂಡಳಿ ತನ್ನ ಅಂಗಸಂಸ್ಥೆ ಶಾಲಾ ಮಂಡಳಿಗಳಿಗೆ ಸೂಚಿಸಿದೆ. 

ಕೊರೋನಾ ಎರಡನೇ ಅಲೆಯಿಂದಾಗಿ ಮೇ 4ಕ್ಕೆ ನಿಗದಿಯಾಗಿದ್ದ 12ನೇ ತರಗತಿ ಪರೀಕ್ಷೆಗಳನ್ನು ಮಂಡಳಿ ಮುಂದೂಡಿದೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ ಆದರೆ ಮಂಡಳಿ ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ.

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಸಿಎಸ್ಇ) ಈಗಾಗಲೇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. "ಸಿಐಎಸ್ಸಿಇ 12ನೇ ತರಗತಿ ಪರೀಕ್ಷೆಗೆ ಹಾಜರುಪಡಿಸುವ ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹವನ್ನು ಆರಂಭಿಸಿದೆ. ಅಲ್ಲದೆ ಪ್ರಾಂಶುಪಾಲರನ್ನು ಕಟ್ಟುನಿಟ್ಟಾಗಿ ಗೌಪ್ಯತೆ ಕಾಪಾಡಿ ಎಂದು ಸೂಚಿಸಲಾಗಿದೆ ಎಂದು ಸಿಐಎಸ್ಸಿಇ ಕಾರ್ಯದರ್ಶಿ ಗೆರ್ರಿ ಅರಾಥೂನ್ ಶಾಲೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 

ಮಂಡಳಿಯು ಕೋರಿದ ಮಾಹಿತಿಯು 11ನೇ ತರಗತಿಯಲ್ಲಿ(2019-20) ಅಭ್ಯರ್ಥಿಗಳು ಗಳಿಸಿದ ವಿಷಯಗಳ ಸರಾಸರಿ ಅಂಕಗಳು ಮತ್ತು 12ನೇ ತರಗತಿಯಲ್ಲಿ(2020-21) ಶಾಲೆಯು ನಡೆಸಿದ ವಿವಿಧ ಪರೀಕ್ಷೆಗಳು ಮತ್ತು ಪರೀಕ್ಷೆಗಳಲ್ಲಿ ಗಳಿಸಿದ ವಿಷಯಗಳ ಸರಾಸರಿ ಅಂಕಗಳನ್ನು ಒಳಗೊಂಡಿದೆ.

ದತ್ತಾಂಶವನ್ನು ಅಪ್ಲೋಡ್ ಮಾಡುವ ಪ್ರಕ್ರಿಕೆಯನ್ನು ಪೂರ್ಣಗೊಳಿಸಲು ಅಂತಿಮ ದಿನಾಂಕವನ್ನು ಮಂಡಳಿಯು ಜೂನ್ 7ಕ್ಕೆ ನಿಗದಿಪಡಿಸಿದೆ. 12ನೇ ತರಗತಿ ಪರೀಕ್ಷೆಯಲ್ಲಿ ಕೇಂದ್ರೀಯ ಪ್ರೌಡಶಾಲಾ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಇನ್ನೂ ಅಂತಿಮ ಕರೆ ನೀಡಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವಾಲಯವು ಜೂನ್ 1 ರೊಳಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ