ನೌಕಾಪಡೆ ಮುಖ್ಯಸ್ಥ ಅ.ಕರಂಬಿರ್ ಸಿಂಗ್ 
ದೇಶ

ಯುದ್ಧದ ಸ್ವರೂಪ ಬದಲಾಗುತ್ತಿರುವ ಸನ್ನಿವೇಶದಲ್ಲಿ ಸೇನೆಯ ಮೂರೂ ಪಡೆಗಳ ಜಂಟಿ ಕಾರ್ಯಾಚರಣೆ ಮುಖ್ಯ: ನೌಕಾಪಡೆ ಮುಖ್ಯಸ್ಥ 

ಇಂದಿನ ಪರಿಸ್ಥಿತಿಯಲ್ಲಿ ಯುದ್ಧದ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳು ಜಂಟಿಯಾಗಿ ಕೆಲಸ ಮಾಡುವುದು ಮುಖ್ಯವಾಗುತ್ತದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಹೇಳಿದ್ದಾರೆ.

ಪುಣೆ: ಇಂದಿನ ಪರಿಸ್ಥಿತಿಯಲ್ಲಿ ಯುದ್ಧದ ಸ್ವರೂಪದಲ್ಲಿ ಬದಲಾವಣೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಮೂರೂ ರಕ್ಷಣಾ ಪಡೆಗಳು ಜಂಟಿಯಾಗಿ ಕೆಲಸ ಮಾಡುವುದು ಮುಖ್ಯವಾಗುತ್ತದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಹೇಳಿದ್ದಾರೆ.

ಇಂದು ಬೆಳಗ್ಗೆ ಪುಣೆಯ ಖಡಕ್ವಾಸ್ಲಾದಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ 140ನೇ ಕೋರ್ಸ್ ನಿಂದ ತೇರ್ಗಡೆ ಹೊಂದಿದ ಪರೇಡ್ ನ್ನು ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು, ಇಂದು ಯುದ್ಧದ ಸ್ವರೂಪ ಬದಲಾಗುತ್ತಿದೆ. ಭೂಮಿ, ಸಮುದ್ರ, ಗಾಳಿ, ಬಾಹ್ಯಾಕಾಶ ಮತ್ತು ಸೈಬರ್‌ನಂತಹ ಎಲ್ಲಾ ಕಡೆಗಳಲ್ಲಿ ವಿರೋಧಿಗಳಿದ್ದು ಅವುಗಳನ್ನು ಎದುರಿಸಿ ಸೆಣಸುವುದು ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮೂರೂ ಸೇನೆಗಳು ಜಂಟಿಯಾಗಿ ಹೋರಾಡುವುದು ಮುಖ್ಯವಾಗುತ್ತದೆ ಎಂದರು.

ಮಿಲಿಟರಿ ವ್ಯವಹಾರಗಳ ಇಲಾಖೆ, ರಕ್ಷಣಾ ಮುಖ್ಯಸ್ಥರ ಸಂಸ್ಥೆ ಮತ್ತು ಶೀಘ್ರದಲ್ಲೇ ಮಿಲಿಟರಿ ಸಶಸ್ತ್ರ ಪಡೆಗಳು ಹೆಗ್ಗುರುತು ರಕ್ಷಣಾ ಸುಧಾರಣೆಗಳನ್ನು ಇದಿರು ನೋಡುತ್ತಿವೆ ಎಂದರು.

ಇಂದಿನ ಸಂಕೀರ್ಣ ಯುದ್ಧಭೂಮಿಯಲ್ಲಿ ಸಶಸ್ತ್ರ ಪಡೆಗಳಲ್ಲಿನ ಜಂಟಿತ್ವವು ಹೆಚ್ಚು ಸಹಕಾರಿ ಮತ್ತು ಪರಿಣಾಮಕಾರಿಯಾದ ಬಲವನ್ನು ಬಳಸಿಕೊಳ್ಳಬೇಕಾಗಿದೆ. ಭವಿಷ್ಯದ ಯುದ್ಧವು ಎಷ್ಟೇ ವಿಕಸನಗೊಂಡರೂ, ಪರಿಣಾಮಕಾರಿ ನಾಯಕತ್ವಕ್ಕಾಗಿ ಕೆಲವು ವೈಯಕ್ತಿಕ ಸಾಮರ್ಥ್ಯಗಳು ಮತ್ತು ಗುಣಲಕ್ಷಣಗಳು ಪ್ರಮುಖವಾದವು ಎಂಬುದನ್ನು  ಎಲ್ಲರೂ ನೆನಪಿನಲ್ಲಿಡಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ