ಸಾಂದರ್ಭಿಕ ಚಿತ್ರ 
ದೇಶ

ಬಾಲ್ ಸ್ವರಾಜ್ ಪೋರ್ಟಲ್ ನಲ್ಲಿ ಕೋವಿಡ್ ನಿಂದ ಅನಾಥರಾದ ಮಕ್ಕಳ ದಾಖಲೆ ನೀಡಿ: ರಾಜ್ಯಗಳಿಗೆ ಎನ್ ಸಿಪಿಸಿಆರ್ ಸೂಚನೆ

ಕೋವಿಡ್-19 ಸೋಂಕಿನಿಂದ ಪೋಷಕರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ ಆದೇಶ ನೀಡಿದೆ.

ನವದೆಹಲಿ: ಕೋವಿಡ್-19 ಸೋಂಕಿನಿಂದ ಪೋಷಕರಿಬ್ಬರನ್ನೂ ಕಳೆದುಕೊಂಡು ಅನಾಥವಾಗಿರುವ ಮಕ್ಕಳ ಬಗ್ಗೆ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣೆ ಆಯೋಗ ಆದೇಶ ನೀಡಿದೆ.

ಅನಾಥ ಮಕ್ಕಳ ಬಗ್ಗೆ ಕೋವಿಡ್ ಕೇರ್ ಲಿಂಕ್ ನಲ್ಲಿರುವ ಬಾಲ್ ಸ್ವರಾಜ್ ಪೋರ್ಟಲ್ ನಲ್ಲಿ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಸರ್ಕಾರಗಳಿಗೆ ಆಯೋಗ ಸೂಚಿಸಿದೆ.

ಈ ಸಂಬಂಧ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಪ್ರಧಾನ ಕಾರ್ಯದರ್ಶಿಗಳಿಗೆ ಮಕ್ಕಳ ಹಕ್ಕು ಆಯೋಗ ಪತ್ರ ಬರೆದಿದೆ.

ಮೊನ್ನೆ ಮೇ 25ರಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಸ್ಮೃತಿ ಇರಾನಿ, ದೇಶಾದ್ಯಂತ ಕೋವಿಡ್-19ನಿಂದ ಪೋಷಕರನ್ನು ಕಳೆದುಕೊಂಡ 577 ಮಕ್ಕಳಿದ್ದಾರೆ. ಅಂತಹ ಮಕ್ಕಳ ರಕ್ಷಣೆ ಮಾಡುವ ಹೊಣೆ ಸರ್ಕಾರದ್ದಾಗಿದೆ ಎಂದಿದ್ದರು.

ಬಾಲ್ ಸ್ವರಾಜ್ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗಾಗಿ ಎನ್‌ಸಿಪಿಸಿಆರ್‌ನ ಆನ್‌ಲೈನ್ ಟ್ರ್ಯಾಕಿಂಗ್ ಪೋರ್ಟಲ್ ಆಗಿದೆ. ಕೋವಿಡ್-19 ನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಆಯೋಗವು ಪೋಷಕರನ್ನು ಅಥವಾ ಇಬ್ಬರನ್ನೂ ಕಳೆದುಕೊಂಡಿರುವ ಮಕ್ಕಳನ್ನು ಪತ್ತೆಹಚ್ಚಲು ಈ ಪೋರ್ಟಲ್ ಬಳಕೆಯನ್ನು ವಿಸ್ತರಿಸಿದೆ ಮತ್ತು ಈ ಪೋರ್ಟಲ್‌ನಲ್ಲಿ 'ಕೋವಿಡ್ ಕೇರ್' ಹೆಸರಿನಲ್ಲಿ ಲಿಂಕ್ ಅನ್ನು ಒದಗಿಸಿದೆ. ಅಂತಹ ಮಕ್ಕಳ ದಾಖಲೆಯನ್ನು ಸಂಬಂಧಪಟ್ಟ ಅಧಿಕಾರಿ / ಇಲಾಖೆಯಿಂದ ಭರ್ತಿ ಮಾಡಬೇಕೆಂದು ಆಯೋಗ ತಿಳಿಸಿದೆ.

ದಾಖಲೆಯನ್ನು ಅಪ್‌ಲೋಡ್ ಮಾಡಲು ಮತ್ತು ಆಯೋಗವು ಒದಗಿಸಿದಂತೆ ಸಾಮಾಜಿಕ ತನಿಖಾ ವರದಿ ಮತ್ತು ವೈಯಕ್ತಿಕ ಮಕ್ಕಳ ಆರೈಕೆ ಯೋಜನೆಯ ರೂಪಗಳನ್ನು ಭರ್ತಿ ಮಾಡಲು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳ ಲಾಗಿನ್ ಐಡಿಗಳನ್ನು ನೀಡಲಾಗಿದೆ.

ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಪೋರ್ಟಲ್‌ನಲ್ಲಿ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಎಲ್ಲಾ ಪ್ರಧಾನ ಕಾರ್ಯದರ್ಶಿಗಳಿಗೆ ಲಾಗಿನ್ ಐಡಿಗಳನ್ನು ಸಹ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!