ಲೊಕೊ ಪೈಲಟ್ ಶಿರಿಶಾ 
ದೇಶ

ಆಕ್ಸಿಜನ್ ಎಕ್ಸ್ ಪ್ರೆಸ್ ನ ಮಹಿಳಾ ಲೊಕೊ ಪೈಲಟ್ ಶಿರಿಶಾ ಜೊತೆ ಪ್ರಧಾನಿ ಸಂವಾದ

ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕೆಲ ದಿನಗಳ ಹಿಂದೆ ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಹೊತ್ತು ತಂದಿದ್ದರು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.

ನವದೆಹಲಿ: ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕೆಲ ದಿನಗಳ ಹಿಂದೆ ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಹೊತ್ತು ತಂದಿದ್ದರು. ಇದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.

ಇದೀಗ ರೈಲನ್ನು ಚಲಾಯಿಸಿಕೊಂಡು ಬಂದ ಲೊಕೋ ಪೈಲಟ್ ಶಿರಿಶಾ ಗಜ್ನಿ ಅವರ ಜೊತೆಗೆ ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿ ಅವರ ಕಾರ್ಯಕ್ಕೆ ಶ್ಲಾಘಿಸಿದ್ದಾರೆ. ಈ ಮೂಲಕ ಮಹಿಳಾ ಲೊಕೋ ಪೈಲಟ್ ನ್ನು ಗುರುತಿಸಿದ್ದಾರೆ.

ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು, ರಸ್ತೆಯ ಮೂಲಕ ಪ್ರಯಾಣಿಸುವ ಆಮ್ಲಜನಕ ಟ್ಯಾಂಕರ್‌ಗಳಿಗಿಂತ ವೇಗವಾಗಿ ದೇಶದ ಎಲ್ಲಾ ಮೂಲೆಗಳಿಗೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಸಾಗಿಸಿದೆ. ಒಂದು ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲನ್ನು ಮಹಿಳೆಯರಿಂದ ಸಂಪೂರ್ಣವಾಗಿ ನಡೆಸಲಾಗುತ್ತಿದೆ ಎಂದು ಕೇಳಿದಾಗ ತಾಯಂದಿರು ಮತ್ತು ಸಹೋದರಿಯರು ಹೆಮ್ಮೆ ಪಡುತ್ತಾರೆ ಎಂದು ಪ್ರಧಾನಿ ಹೇಳಿದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ಪರವಾಗಿ ಕೆಲಸ ಮಾಡುವ ಸ್ಪೂರ್ತಿಯನ್ನು ತಾನು ಪೋಷಕರಿಂದ ಪಡೆದುಕೊಂಡೆ, ಜನರ ಜೀವ ಉಳಿಸುವ ಕೆಲಸ ಮಾಡುತ್ತಿರುವ ಭಾಗವಾಗಿರುವುದಕ್ಕೆ ತಮಗೆ ಖುಷಿಯಿದೆ, ದೇವರ ಆಶೀರ್ವಾದವಿದು ಎಂದು ಶಿರಿಶಾ ಪ್ರಧಾನಿ ಜೊತೆ ಮಾತನಾಡುವಾಗ ಹೇಳಿದ್ದಾರೆ.

ಇನ್ನು ಪ್ರಧಾನಿಯವರು ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಜೌನ್ಪುರ್ ನಲ್ಲಿ ದ್ರವ ಆಕ್ಸಿಜನ್ ಪೂರೈಕೆಗೆ ಆಕ್ಸಿಜನ್ ಟ್ಯಾಂಕರ್ ನ್ನು ಸರಬರಾಜು ಮಾಡುತ್ತಿರುವ ನಿವಾಸ್ ದಿನೇಶ್ ಉಪಾಧ್ಯಾಯ್ ಜೊತೆ ಮಾತನಾಡಿದರು.

ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಆಕ್ಸಿಜನ್ ಟ್ಯಾಂಕರ್ ಮತ್ತು ದ್ರವ ಆಕ್ಸಿಜನ್ ಕಂಟೈನರ್ ಗಳನ್ನು ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಕೇಂದ್ರಗಳಿಂದ ಸಾಗಿಸುತ್ತಿದ್ದೇವೆ ಎಂದು ಪ್ರಧಾನಿ ಜೊತೆ ತಮ್ಮ ಅನುಭವವನ್ನು ಗ್ರೂಪ್ ಕ್ಯಾಪ್ಟನ್ ಎ ಕೆ ಪಟ್ನಾಯಕ್ ಹಂಚಿಕೊಂಡರು.

ದೆಹಲಿಯ ಪ್ರಕಾಶ್ ಕಂಡ್ ಪಾಲ್ ಪ್ರಧಾನಿ ಜೊತೆಗೆ ಸಂವಾದದಲ್ಲಿ, ಕಳೆದ 20 ವರ್ಷಗಳಿಂದ ಲ್ಯಾಪ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಕೊರೋನಾ ಬಂದ ನಂತರ ಐಎಲ್ ಬಿಎಸ್ ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿರುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT