ತೆಲಂಗಾಣದ ಐಟಿ ಖಾತೆ ಸಚಿವ ರಾಮ ರಾವ್ 
ದೇಶ

ಡಿ.ಕೆ.ಶಿವಕುಮಾರ್ ಟ್ವೀಟ್ ಗೆ ತೆಲಂಗಾಣ ಸಚಿವ ರಾಮ ರಾವ್ ಸ್ಪಂದನೆ: ಮಂಡ್ಯ ಮೂಲದ ರೋಗಿಯ ಶವ ನೀಡಿದ ಹೈದರಾಬಾದ್ ಆಸ್ಪತ್ರೆ 

ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗೆ ತೊಂದರೆ ಅನುಭವಿಸುತ್ತಿದ್ದ ಮಂಡ್ಯ ಜಿಲ್ಲೆಯ ಮಹಿಳೆಯೊಬ್ಬರಿಗೆ ಸಹಾಯ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದ ಐಟಿ ಇಲಾಖೆ ಸಚಿವ ಕೆ ಟಿ ರಾಮ ರಾವ್ ಅವರ ನೆರವು ಕೋರಿ ಸೂಕ್ತ ಸ್ಪಂದನೆ ಕೆಲವೇ ಹೊತ್ತಿನಲ್ಲಿ ಸಿಕ್ಕಿದೆ.

ಹೈದರಾಬಾದ್: ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗೆ ತೊಂದರೆ ಅನುಭವಿಸುತ್ತಿದ್ದ ಮಂಡ್ಯ ಜಿಲ್ಲೆಯ ಮಹಿಳೆಯೊಬ್ಬರಿಗೆ ಸಹಾಯ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದ ಐಟಿ ಇಲಾಖೆ ಸಚಿವ ಕೆ ಟಿ ರಾಮ ರಾವ್ ಅವರಿಗೆ ಟ್ವೀಟ್ ಮಾಡಿದ್ದಕ್ಕೆ ಸಹಾಯ ಸಿಕ್ಕಿದೆ.

ನಿನ್ನೆ ಸಾಯಂಕಾಲ 6.45ರ ಹೊತ್ತಿಗೆ ರಾಮ ರಾವ್ ಅವರ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಶಿವಕುಮಾರ್, ಹೈದರಾಬಾದ್ ನ ಮೆಡಿಕವರ್ ಆಸ್ಪತ್ರೆಯಲ್ಲಿ ಮಂಡ್ಯದ ಶಶಿಕಲಾ ಮಂಜುನಾಥ್ ಅವರ ಪತಿ ಮೃತಪಟ್ಟಿದ್ದು ಈ ಸಂದರ್ಭದಲ್ಲಿ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಕೋರಿದ್ದಾರೆ.

ಆಸ್ಪತ್ರೆಯ ಒಟ್ಟು ಬಿಲ್  7.5 ಲಕ್ಷ ರೂಪಾಯಿಗಳಾಗಿದ್ದು ಅದರಲ್ಲಿ ಕೇವಲ 2 ಲಕ್ಷ ರೂಪಾಯಿ ಮಾತ್ರ ಕುಟುಂಬದವರು ಪಾವತಿ ಮಾಡಿದ್ದಾರೆ ಎಂದು ಆಸ್ಪತ್ರೆ, ಶವವನ್ನು ಕುಟುಂಬದವರಿಗೆ ನೀಡಲು ನಿರಾಕರಿಸಿತ್ತು. ಇದರಿಂದ ಮಹಿಳೆ ಕಾಂಗ್ರೆಸ್ ಅಧ್ಯಕ್ಷರ ಮೊರೆ ಹೋಗಿದ್ದರು.

ಡಿ ಕೆ ಶಿವಕುಮಾರ್ ಅವರು ಟ್ವೀಟ್ ಮೂಲಕ ರಾಮ ರಾವ್ ಅವರ ಗಮನಕ್ಕೆ ಇದನ್ನು ನಿನ್ನೆ  ಸಾಯಂಕಾಲ ತಂದರು. ಕೆಲವೇ ಹೊತ್ತಿನಲ್ಲಿ ರಾಮ ರಾವ್ ಅವರ ತಂಡ ಆಸ್ಪತ್ರೆ ಅಧಿಕಾರಿಗಳನ್ನು ಸಂಪರ್ಕಿಸಿ ಹಣದ ವ್ಯವಸ್ಥೆ ಮಾಡಿ ಮಹಿಳೆಯ ಪತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸುವ ನೆರವು ಮಾಡಿದ್ದರು. ಮತ್ತೆ ರಾತ್ರಿ 9.28ರ ಹೊತ್ತಿಗೆ ಡಿ ಕೆ ಶಿವಕುಮಾರ್ ಟ್ವೀಟ್ ಮೂಲಕ ರಾಮ ರಾವ್ ಅವರಿಗೆ ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT