ತೆಲಂಗಾಣದ ಐಟಿ ಖಾತೆ ಸಚಿವ ರಾಮ ರಾವ್ 
ದೇಶ

ಡಿ.ಕೆ.ಶಿವಕುಮಾರ್ ಟ್ವೀಟ್ ಗೆ ತೆಲಂಗಾಣ ಸಚಿವ ರಾಮ ರಾವ್ ಸ್ಪಂದನೆ: ಮಂಡ್ಯ ಮೂಲದ ರೋಗಿಯ ಶವ ನೀಡಿದ ಹೈದರಾಬಾದ್ ಆಸ್ಪತ್ರೆ 

ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗೆ ತೊಂದರೆ ಅನುಭವಿಸುತ್ತಿದ್ದ ಮಂಡ್ಯ ಜಿಲ್ಲೆಯ ಮಹಿಳೆಯೊಬ್ಬರಿಗೆ ಸಹಾಯ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದ ಐಟಿ ಇಲಾಖೆ ಸಚಿವ ಕೆ ಟಿ ರಾಮ ರಾವ್ ಅವರ ನೆರವು ಕೋರಿ ಸೂಕ್ತ ಸ್ಪಂದನೆ ಕೆಲವೇ ಹೊತ್ತಿನಲ್ಲಿ ಸಿಕ್ಕಿದೆ.

ಹೈದರಾಬಾದ್: ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗೆ ತೊಂದರೆ ಅನುಭವಿಸುತ್ತಿದ್ದ ಮಂಡ್ಯ ಜಿಲ್ಲೆಯ ಮಹಿಳೆಯೊಬ್ಬರಿಗೆ ಸಹಾಯ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದ ಐಟಿ ಇಲಾಖೆ ಸಚಿವ ಕೆ ಟಿ ರಾಮ ರಾವ್ ಅವರಿಗೆ ಟ್ವೀಟ್ ಮಾಡಿದ್ದಕ್ಕೆ ಸಹಾಯ ಸಿಕ್ಕಿದೆ.

ನಿನ್ನೆ ಸಾಯಂಕಾಲ 6.45ರ ಹೊತ್ತಿಗೆ ರಾಮ ರಾವ್ ಅವರ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಶಿವಕುಮಾರ್, ಹೈದರಾಬಾದ್ ನ ಮೆಡಿಕವರ್ ಆಸ್ಪತ್ರೆಯಲ್ಲಿ ಮಂಡ್ಯದ ಶಶಿಕಲಾ ಮಂಜುನಾಥ್ ಅವರ ಪತಿ ಮೃತಪಟ್ಟಿದ್ದು ಈ ಸಂದರ್ಭದಲ್ಲಿ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಕೋರಿದ್ದಾರೆ.

ಆಸ್ಪತ್ರೆಯ ಒಟ್ಟು ಬಿಲ್  7.5 ಲಕ್ಷ ರೂಪಾಯಿಗಳಾಗಿದ್ದು ಅದರಲ್ಲಿ ಕೇವಲ 2 ಲಕ್ಷ ರೂಪಾಯಿ ಮಾತ್ರ ಕುಟುಂಬದವರು ಪಾವತಿ ಮಾಡಿದ್ದಾರೆ ಎಂದು ಆಸ್ಪತ್ರೆ, ಶವವನ್ನು ಕುಟುಂಬದವರಿಗೆ ನೀಡಲು ನಿರಾಕರಿಸಿತ್ತು. ಇದರಿಂದ ಮಹಿಳೆ ಕಾಂಗ್ರೆಸ್ ಅಧ್ಯಕ್ಷರ ಮೊರೆ ಹೋಗಿದ್ದರು.

ಡಿ ಕೆ ಶಿವಕುಮಾರ್ ಅವರು ಟ್ವೀಟ್ ಮೂಲಕ ರಾಮ ರಾವ್ ಅವರ ಗಮನಕ್ಕೆ ಇದನ್ನು ನಿನ್ನೆ  ಸಾಯಂಕಾಲ ತಂದರು. ಕೆಲವೇ ಹೊತ್ತಿನಲ್ಲಿ ರಾಮ ರಾವ್ ಅವರ ತಂಡ ಆಸ್ಪತ್ರೆ ಅಧಿಕಾರಿಗಳನ್ನು ಸಂಪರ್ಕಿಸಿ ಹಣದ ವ್ಯವಸ್ಥೆ ಮಾಡಿ ಮಹಿಳೆಯ ಪತಿಯ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸುವ ನೆರವು ಮಾಡಿದ್ದರು. ಮತ್ತೆ ರಾತ್ರಿ 9.28ರ ಹೊತ್ತಿಗೆ ಡಿ ಕೆ ಶಿವಕುಮಾರ್ ಟ್ವೀಟ್ ಮೂಲಕ ರಾಮ ರಾವ್ ಅವರಿಗೆ ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT