ಬಾಲಿವುಡ್ ನಟಿ ಜೂಹಿ ಚಾವ್ಲಾ 
ದೇಶ

ಭಾರತದಲ್ಲಿ 5ಜಿ ಜಾರಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲ!

ರೇಡಿಯೊಫ್ರೀಕ್ವೆನ್ಸಿ (ಆರ್ ಎಫ್) ವಿಕಿರಣಗಳ ಕುರಿತುನಿರಂತರ ಜಾಗೃತಿ ಮೂಡಿಸುತ್ತಿರುವ ಬಾಲಿವುಡ್ ನಟಿ ಜೂಹಿ ಚಾವ್ಲ ಭಾರತದಲ್ಲಿ 5 ಜಿ ಜಾರಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. 

ನವದೆಹಲಿ: ರೇಡಿಯೊಫ್ರೀಕ್ವೆನ್ಸಿ (ಆರ್ ಎಫ್) ವಿಕಿರಣಗಳ ಕುರಿತುನಿರಂತರ ಜಾಗೃತಿ ಮೂಡಿಸುತ್ತಿರುವ ಬಾಲಿವುಡ್ ನಟಿ ಜೂಹಿ ಚಾವ್ಲ ಭಾರತದಲ್ಲಿ 5 ಜಿ ಜಾರಿ ವಿರೋಧಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ. 

5 ಜಿ ತಂತ್ರಜ್ಞಾನ ಜಾರಿಯಾದಲ್ಲಿ ಅದರಿಂದ ಈಗಿರುವ ವಿಕರಣಗಳಿಗಿಂತ 10-100 ಪಟ್ಟು ಹೆಚ್ಚಿನ ಆರ್ ಎಫ್ ರೇಡಿಯೇಷನ್ ಜನ ಹಾಗೂ ಪ್ರಾಣಿಗಳ ಮೇಲೆ ಬೀರುತ್ತದೆ ಎಂದು ಜೂಹಿ ಚಾವ್ಲ 5 ಜಿ ಜಾರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  

ನ್ಯಾ.ಸಿ ಹರಿಶಂಕರ್ ಈ ಅರ್ಜಿ ಕುರಿತ ವಿಚಾರಣೆ ನಡೆಸುವುದರಿಂದ ಹಿಂದೆ ಸರಿದಿದ್ದು, ದೆಹಲಿ ಹೈಕೋರ್ಟ್ ನ ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಿದೆ. ಜೂ.02 ರಂದು ಅರ್ಜಿ ವಿಚಾರಣೆಗೆ ಬರಲಿದೆ.  

ಚಾವ್ಲಾ ಅವರ ವಕ್ತಾರರು ಈ ಬಗ್ಗೆ ಹೇಳಿಕೆ ನೀಡಿದ್ದು, 5ಜಿ ತಂತ್ರಜ್ಞಾನ ಮನುಷ್ಯರಿಗೆ ಹಾಗೂ ಎಲ್ಲಾ ವಿಧದ ಜೀವಿಗಳಿಗೆ ಸುರಕ್ಷವಾಗಿರಲಿದೆ ಎಂಬುದನ್ನು ಪ್ರಮಾಣೀಕರಿಸಲು ಹಾಗೂ ಆರ್ ಎಫ್ ರೇಡಿಯೇಷನ್ ಗೆ ಸಂಬಂಧಿಸಿದಂತೆ ಇದಕ್ಕೆ ಪೂರಕವಾದ ಅಧ್ಯಯನಗಳನ್ನು ಸಲ್ಲಿಸಲು ಪ್ರತಿವಾದಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ" ಎಂದು ತಿಳಿಸಿದ್ದಾರೆ. 

5 ಜಿ ಯೋಜನೆಗಳಿಂದ ಮನುಕುಲ ಹಾಗೂ ಭೂಮಿಯ ಪರಿಸರಕ್ಕೆ ಗಂಭೀರ ಹಾನಿಯುಂಟಾಗಲಿದೆ. ಈಗ ಸಂಗ್ರಹಿಸಲಾಗಿರುವ ಕ್ಲಿನಿಕಲ್ ಸಾಕ್ಷ್ಯಗಳ ಪ್ರಕಾರ ಕ್ಯಾನ್ಸರ್, ಹೃದಯ ಸಮಸ್ಯೆಗಳು, ಮಧುಮೇಹದಂತಹ ಆಧುನಿಕ ನಾಗರಿಕತೆಯ ಆರೋಗ್ಯ ಸಮಸ್ಯೆಗಳು ಎಲೆಕ್ಟ್ರ‍ೋ ಮ್ಯಾಗ್ನೆಟಿಕ್ ಮಾಲಿನ್ಯದಿಂದ ಉಂಟಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ 10,000 ಅಧ್ಯಯನಗಳಿವೆ ಅದನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT