ಅಪಘಾತದಲ್ಲಿ ಮೃತಪಟ್ಟ ಆನ್ಸಿ ಕಬೀರ್ ಮತ್ತು ಅಂಜನಾ 
ದೇಶ

ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ದುರ್ಮರಣ

ಮಿಸ್ ಸೌತ್ ಇಂಡಿಯಾ ಮತ್ತು ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ಮಾಜಿ ಮಿಸ್ ಕೇರಳ ರನ್ನರ್ ಆಪ್ ಅಂಜನಾ ಶಹಜಾನ್ ಇಂದು ಮುಂಜಾನೆ ಕೊಚ್ಚಿಯ ವೈಟ್ಟಿಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

ಕೊಚ್ಚಿ: ಮಿಸ್ ಸೌತ್ ಇಂಡಿಯಾ ಮತ್ತು ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ಮಾಜಿ ಮಿಸ್ ಕೇರಳ ರನ್ನರ್ ಆಪ್ ಅಂಜನಾ ಶಹಜಾನ್ ಇಂದು ಮುಂಜಾನೆ ಕೊಚ್ಚಿಯ ವೈಟ್ಟಿಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ನಿವಾಸಿ, ಅಂಜನಾ ತ್ರಿಶೂರ್ ನವರು. ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಟಿಲ್ಲಾ ಕಡೆಯಿಂದ ಬರುತ್ತಿದ್ದ ಆನ್ಸಿ ಮತ್ತು ಅಂಜನಾ ಅವರಿದ್ದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಮರವೊಂದಕ್ಕೆ ಗುದಿದ್ದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆನ್ಸಿ ಮತ್ತು ಅಂಜನಾ ಅವರೊಂದಿಗೆ ಇತರ ಇಬ್ಬರು ಇದ್ದರು ಎನ್ನಲಾಗಿದೆ.

 ಗಂಭೀರ ಸ್ಥಿತಿಯಲ್ಲಿದ್ದ ಆನ್ಸಿ ಮತ್ತು ಅಂಜನಾ ಅವರನ್ನು ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನ್ಸಿ ಮತ್ತು ಅಂಜನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಪೊಲೀಸರು ಸಿಸಿಟಿವಿ ಕ್ಯಾಮರಾ ನಡೆಸಿದಾಗ, ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು, ನಿಯಂತ್ರಣ ಕಳೆದುಕೊಂಡು ಮುಂದೆ ಇದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಅಫಘಾತ ಸಂಭವಿಸಿರಬಹುದು ಎನ್ನಲಾಗಿದೆ. 

ಆನ್ಸಿ 2019ರಲ್ಲಿ ಮಿಸ್ ಕೇರಳ ಕಿರೀಟ ತೊಟ್ಟಿದ್ದರು, ಇದೇ ಕಾರ್ಯಕ್ರಮದಲ್ಲಿ ಅಂಜನಾ ರನ್ನರ್ ಆಪ್ ಆಗಿದ್ದರು. ಈ ವರ್ಷದ ಆಗಸ್ಟ್ ತಿಂಗಳಲ್ಲಿ ಆನ್ಸಿ ಮಿಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT