ಅಪಘಾತದಲ್ಲಿ ಮೃತಪಟ್ಟ ಆನ್ಸಿ ಕಬೀರ್ ಮತ್ತು ಅಂಜನಾ 
ದೇಶ

ಭೀಕರ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ದುರ್ಮರಣ

ಮಿಸ್ ಸೌತ್ ಇಂಡಿಯಾ ಮತ್ತು ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ಮಾಜಿ ಮಿಸ್ ಕೇರಳ ರನ್ನರ್ ಆಪ್ ಅಂಜನಾ ಶಹಜಾನ್ ಇಂದು ಮುಂಜಾನೆ ಕೊಚ್ಚಿಯ ವೈಟ್ಟಿಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

ಕೊಚ್ಚಿ: ಮಿಸ್ ಸೌತ್ ಇಂಡಿಯಾ ಮತ್ತು ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಮತ್ತು ಮಾಜಿ ಮಿಸ್ ಕೇರಳ ರನ್ನರ್ ಆಪ್ ಅಂಜನಾ ಶಹಜಾನ್ ಇಂದು ಮುಂಜಾನೆ ಕೊಚ್ಚಿಯ ವೈಟ್ಟಿಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 

ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ನಿವಾಸಿ, ಅಂಜನಾ ತ್ರಿಶೂರ್ ನವರು. ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈಟಿಲ್ಲಾ ಕಡೆಯಿಂದ ಬರುತ್ತಿದ್ದ ಆನ್ಸಿ ಮತ್ತು ಅಂಜನಾ ಅವರಿದ್ದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಮರವೊಂದಕ್ಕೆ ಗುದಿದ್ದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆನ್ಸಿ ಮತ್ತು ಅಂಜನಾ ಅವರೊಂದಿಗೆ ಇತರ ಇಬ್ಬರು ಇದ್ದರು ಎನ್ನಲಾಗಿದೆ.

 ಗಂಭೀರ ಸ್ಥಿತಿಯಲ್ಲಿದ್ದ ಆನ್ಸಿ ಮತ್ತು ಅಂಜನಾ ಅವರನ್ನು ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನ್ಸಿ ಮತ್ತು ಅಂಜನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಪೊಲೀಸರು ಸಿಸಿಟಿವಿ ಕ್ಯಾಮರಾ ನಡೆಸಿದಾಗ, ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು, ನಿಯಂತ್ರಣ ಕಳೆದುಕೊಂಡು ಮುಂದೆ ಇದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಅಫಘಾತ ಸಂಭವಿಸಿರಬಹುದು ಎನ್ನಲಾಗಿದೆ. 

ಆನ್ಸಿ 2019ರಲ್ಲಿ ಮಿಸ್ ಕೇರಳ ಕಿರೀಟ ತೊಟ್ಟಿದ್ದರು, ಇದೇ ಕಾರ್ಯಕ್ರಮದಲ್ಲಿ ಅಂಜನಾ ರನ್ನರ್ ಆಪ್ ಆಗಿದ್ದರು. ಈ ವರ್ಷದ ಆಗಸ್ಟ್ ತಿಂಗಳಲ್ಲಿ ಆನ್ಸಿ ಮಿಸ್ ಸೌತ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT