ಆನ್ಸಿ ಕಬೀರ್ ಹಾಗೂ ಅಂಜನಾ ಶಾಜಹಾನ್ 
ದೇಶ

ಕೇರಳ ರಸ್ತೆ ಅಪಘಾತ: ಮಿಸ್ ಸೌತ್ ಇಂಡಿಯಾ ಆನ್ಸಿ, ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಸಾವು

ಸೋಮವಾರ ಮುಂಜಾನೆ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜಹಾನ್ ಸಾವನ್ನಪ್ಪಿದ್ದಾರೆ.

ಕೊಚ್ಚಿ: ಸೋಮವಾರ ಮುಂಜಾನೆ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜಹಾನ್ ಸಾವನ್ನಪ್ಪಿದ್ದಾರೆ.

ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್‌ ಮೂಲದವರಾಗಿದ್ದು, ಅಂಜನಾ ತ್ರಿಶೂರ್‌ ಮೂಲದವರಾಗಿದ್ದಾರೆ.

ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಮಧ್ಯರಾತ್ರಿ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟಿಲ ಕಡೆಯಿಂದ ಬರುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಸಿ ಮತ್ತು ಅಂಜನಾ  ಜೊತೆತ್ರಿಶೂರ್ ಮೂಲದ ಅಬ್ದುಲ್ ರೆಹಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರ ಗಾಯಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟರು. ದ್ವಿಚಕ್ರ ವಾಹನದಲ್ಲಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಅಂಗಡಿಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಾರು ಅತಿವೇಗದಲ್ಲಿ ಚಲಿಸುತ್ತಿತ್ತು,   ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಆನ್ಸಿ 2019 ರಲ್ಲಿ ಮಿಸ್ ಕೇರಳ ಪ್ರಶಸ್ತಿಯನ್ನು ಗೆದ್ದಿದ್ದರು, ಮತ್ತು ಅಂಜನಾ ಈವೆಂಟ್‌ನಲ್ಲಿ ರನ್ನರ್ ಅಪ್ ಆಗಿದ್ದರು. ಈ ವರ್ಷದ ಆಗಸ್ಟ್‌ನಲ್ಲಿ ಆನ್ಸಿ ಮಿಸ್ ಸೌತ್ ಇಂಡಿಯಾ ಪ್ರಶಸ್ತಿ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT