ಈಟೆಲ ರಾಜೇಂದರ್ 
ದೇಶ

ತೆಲಂಗಾಣ ಉಪ ಚುನಾವಣೆ: ಆಡಳಿತಾರೂಢ ಟಿಆರ್ ಎಸ್ ಗೆ ಮುಖಭಂಗ, ಹುಜೂರಾಬಾದ್ ನಲ್ಲಿ ಬಿಜೆಪಿ ಭರ್ಜರಿ ಜಯ

ತೆಲಂಗಾಣ ಉಪ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆ ತೀವ್ರ ಮುಖಭಂಗವಾಗಿದ್ದು, ಹುಜೂರಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಈಟೆಲ ರಾಜೇಂದರ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

ಹೈದರಾಬಾದ್: ತೆಲಂಗಾಣ ಉಪ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆ ತೀವ್ರ ಮುಖಭಂಗವಾಗಿದ್ದು, ಹುಜೂರಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಈಟೆಲ ರಾಜೇಂದರ್ ಅವರು ಭರ್ಜರಿ ಜಯ ಗಳಿಸಿದ್ದಾರೆ.

ಈ ಹಿಂದೆ ಸಿಎಂ ಚಂದ್ರಶೇಖರ್ ರಾವ್ ಅವರ ತೆಲಂಗಾಣ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಈಟೆಲ ರಾಜೇಂದರ್ ಅವರನ್ನು ಭೂಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಸಂಪುಟದಿಂದ ಕೈ ಬಿಡಲಾಗಿತ್ತು. ಬಳಿಕ ಈಟಲ ರಾಜೇಂದರ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಹಿನ್ನಲೆಯಲ್ಲಿ ಅವರು ಪ್ರತಿನಿಧಿಸುತ್ತಿದ್ದ ಹುಜೂರಾಬಾದ್ ನಲ್ಲಿ ಉಪ ಚುನಾವಣೆ ಎದುರಾಗಿತ್ತು. 

ಇಂದು ಈ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ತಮ್ಮ ಹುಜೂರಾಬಾದ್ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಈಟಲ ರಾಜೇಂದರ್ ಅವರು ಯಶಸ್ವಿಯಾಗಿದ್ದಾರೆ. ತಮ್ಮ ಸಮೀಪದ ಅಭ್ಯರ್ಥಿ ಟಿಆರ್ಎಸ್ ನ ಗೆಲ್ಲು ಶ್ರೀನಿವಾಸ್ ಯಾದವ್ ಅವರನ್ನು 24,068 ಮತಗಳ ಅಂತರದಿಂದ ಸೋಲಿಸಿದ್ದಾರೆ. ಆ ಮೂಲಕ 2004 ರಿಂದ ಹುಜೂರಾಬಾದ್ ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಿದ್ದಾರೆ.

ಒಟ್ಟು ಚಲಾವಣೆಯಾದ ಮತಗಳಲ್ಲಿ ಈಟೆಲ ರಾಜೇಂದರ್ 1,06,780 ಮತಗಳನ್ನು ಪಡೆದರೆ, ಶ್ರೀನಿವಾಸ್ ಯಾದವ್ 82,712 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟ್ ನರಸಿಂಗ್ ರಾವ್ 3,012 ಮತಗಳನ್ನು ಪಡೆದರು.

2018 ರಲ್ಲಿ, ರಾಜೇಂದರ್ ಹುಜೂರಾಬಾದ್ ಅನ್ನು ಉಳಿಸಿಕೊಂಡಿದ್ದರು. ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕೌಶಿಕ್ ರೆಡ್ಡಿ ಅವರನ್ನು 43,000 ಮತಗಳಿಂದ ಸೋಲಿಸಿದ್ದರು. ಟಿಆರ್‌ಎಸ್ ಅಭ್ಯರ್ಥಿಯಾಗಿದ್ದ ರಾಜೇಂದರ್ 1,04,840 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ 61,121 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿ ಪಿ.ರಘು ಕೇವಲ 1,683 ಮತಗಳನ್ನು ಪಡೆದು, ನೋಟಾ ಮತಗಳಿಗಿಂತ (2,867) ಕಡಿಮೆಯಾಗಿತ್ತು. ಕೌಶಿಕ್ ರೆಡ್ಡಿ ಇತ್ತೀಚೆಗೆ ಕಾಂಗ್ರೆಸ್ ತೊರೆದು ಟಿಆರ್‌ಎಸ್ ಸೇರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT