ದೇಶ

ಉಪಚುನಾವಣೆ ಮತ ಎಣಿಕೆ: ವಿಜಯೋತ್ಸವ ಮೆರವಣಿಗೆಗಳ ಮೇಲೆ ಚುನಾವಣಾ ಆಯೋಗ ನಿಷೇಧ

Manjula VN

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಫಲಿತಾಂಶ ಹೊರಬಿದ್ದ ನಂತರ ವಿಜಯೋತ್ಸವದ ಮೆರವಣಿಗೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಮಂಗಳವಾರ ಸೂಚನೆ ನೀಡಿದೆ.

ಕೋವಿಡ್‌–19 ಪ್ರಸರಣ ತಡೆಯುವ ಸಂಬಂಧ ವಿಜಯೋತ್ಸವ ಹಾಗೂ ಮೆರವಣಿಗೆಗಳ ಮೇಲೆ ಈಗಾಗಲೇ ನಿಷೇಧ ಹೇರಿರುವುದನ್ನು ಆಯೋಗವು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ನೆನಪಿಸಿದೆ.

ಕರ್ನಾಟಕದ ಹಾನಗಲ್‌, ಸಿಂದಗಿ ಸೇರಿದಂತೆ ವಿವಿಧ ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

SCROLL FOR NEXT