ಅನಿಲ್‌ ದೇಶಮುಖ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ನವೆಂಬರ್ 6 ರವರೆಗೆ ಇಡಿ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ನ್ಯಾಯಾಲಯ ಮಂಗಳವಾರ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಗೆ ಒಪ್ಪಿಸಿದೆ.

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ನ್ಯಾಯಾಲಯ ಮಂಗಳವಾರ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಗೆ ಒಪ್ಪಿಸಿದೆ.

ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ಅವರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ ನ್ಯಾಯಾಲಯಕ್ಕೆ ಹಾಜರುಪಡಿಸಿತು ಮತ್ತು ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 14 ದಿನ ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಿತು.

ಆರೋಪಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪಿಬಿ ಜಾಧವ್ ಅವರು ಮಹಾರಾಷ್ಟ್ರ ಮಾಜಿ ಗೃಹ ಸಚಿವರನ್ನು ಹೆಚ್ಚಿನ ವಿಚಾರಣೆಗಾಗಿ ನವೆಂಬರ್ 6 ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ದೇಶಮುಖ್ ಅವರು ರಾಜ್ಯದ ಗೃಹ ಸಚಿವರಾಗಿದ್ದಾಗ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT