ಗಂಗಾನದಿ 
ದೇಶ

ಗಂಗಾ ನದಿ ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲ, ಸಾರ್ವಜನಿಕರ ಜವಾಬ್ದಾರಿ ಸಹ: ಜಲಶಕ್ತಿ ಸಚಿವ

ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸ ಎಂದು ಭಾವಿಸದೇ ಇದರಲ್ಲಿ ಸಾರ್ವಜನಿಕರ ಜವಾಬ್ದಾರಿಯೂ ಇದೆ ಎಂದು ಪರಿಗಣಿಸಬೇಕಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು...

ನವದೆಹಲಿ: ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸ ಎಂದು ಭಾವಿಸದೇ ಇದರಲ್ಲಿ ಸಾರ್ವಜನಿಕರ ಜವಾಬ್ದಾರಿಯೂ ಇದೆ ಎಂದು ಪರಿಗಣಿಸಬೇಕಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಬುಧವಾರ ಹೇಳಿದ್ದಾರೆ.

ಗಂಗಾ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ತಾವು ಪರಿಸರದ ಪಾಲಕರು ಎಂದು ಭಾವಿಸಬೇಕು ಎಂದರು.

ಈ ಪರಿಸರದ ಪಾಲಕನ ಪಾತ್ರ ನಮ್ಮದು, ಅದನ್ನು ಉತ್ತಮಪಡಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕೇ ವಿನಃ ಮತ್ತಷ್ಟು ಹಾಳು ಮಾಡಬಾರದು. ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲದೆ ತನ್ನ ಜವಾಬ್ದಾರಿ ಇದೆ ಎಂದು ಸಮಾಜ ಯೋಚಿಸಬೇಕಿದೆ ಎಂದು ಜಲಶಕ್ತಿ ಸಚಿವರು ಹೇಳಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಗಂಗಾ ನದಿಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. "ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ, ಸ್ವಚ್ಛ ಗಂಗಾ ಮಿಷನ್ ಯಶಸ್ವಿಯಾಗಲಿದೆ ಎಂದು ನನಗೆ ವಿಶ್ವಾಸವಿದೆ. ಒಬ್ಬ ಭಾರತೀಯನಾಗಿ, ಗಂಗಾ ನದಿಯನ್ನು ಪುನರುಜ್ಜೀವನಗೊಳಿಸುವುದು ಮತ್ತು ಸ್ವಚ್ಛಗೊಳಿಸುವುದು ದೇಶದ ಅತ್ಯಂತ ನಿರ್ಣಾಯಕ ಕಾರ್ಯಕ್ರಮ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT