ಗಂಗಾನದಿ 
ದೇಶ

ಗಂಗಾ ನದಿ ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲ, ಸಾರ್ವಜನಿಕರ ಜವಾಬ್ದಾರಿ ಸಹ: ಜಲಶಕ್ತಿ ಸಚಿವ

ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸ ಎಂದು ಭಾವಿಸದೇ ಇದರಲ್ಲಿ ಸಾರ್ವಜನಿಕರ ಜವಾಬ್ದಾರಿಯೂ ಇದೆ ಎಂದು ಪರಿಗಣಿಸಬೇಕಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು...

ನವದೆಹಲಿ: ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸ ಎಂದು ಭಾವಿಸದೇ ಇದರಲ್ಲಿ ಸಾರ್ವಜನಿಕರ ಜವಾಬ್ದಾರಿಯೂ ಇದೆ ಎಂದು ಪರಿಗಣಿಸಬೇಕಾಗಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಬುಧವಾರ ಹೇಳಿದ್ದಾರೆ.

ಗಂಗಾ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ತಾವು ಪರಿಸರದ ಪಾಲಕರು ಎಂದು ಭಾವಿಸಬೇಕು ಎಂದರು.

ಈ ಪರಿಸರದ ಪಾಲಕನ ಪಾತ್ರ ನಮ್ಮದು, ಅದನ್ನು ಉತ್ತಮಪಡಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕೇ ವಿನಃ ಮತ್ತಷ್ಟು ಹಾಳು ಮಾಡಬಾರದು. ಗಂಗಾ ನದಿಯನ್ನು ಸ್ವಚ್ಛಗೊಳಿಸುವುದು ಕೇವಲ ಸರ್ಕಾರದ ಕೆಲಸವಲ್ಲದೆ ತನ್ನ ಜವಾಬ್ದಾರಿ ಇದೆ ಎಂದು ಸಮಾಜ ಯೋಚಿಸಬೇಕಿದೆ ಎಂದು ಜಲಶಕ್ತಿ ಸಚಿವರು ಹೇಳಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಗಂಗಾ ನದಿಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಬೇಕಿದೆ. "ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ, ಸ್ವಚ್ಛ ಗಂಗಾ ಮಿಷನ್ ಯಶಸ್ವಿಯಾಗಲಿದೆ ಎಂದು ನನಗೆ ವಿಶ್ವಾಸವಿದೆ. ಒಬ್ಬ ಭಾರತೀಯನಾಗಿ, ಗಂಗಾ ನದಿಯನ್ನು ಪುನರುಜ್ಜೀವನಗೊಳಿಸುವುದು ಮತ್ತು ಸ್ವಚ್ಛಗೊಳಿಸುವುದು ದೇಶದ ಅತ್ಯಂತ ನಿರ್ಣಾಯಕ ಕಾರ್ಯಕ್ರಮ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ