ಸಾಂಕೇತಿಕ ಚಿತ್ರ 
ದೇಶ

ಅಫ್ಘಾನ್ ನಲ್ಲಿ ತಾಲೀಬಾನ್ ಆಡಳಿತದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆ ಏರಿಕೆ!

ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ಆಡಳಿತ ಜಾರಿಗೆ ಬಂದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆಯ ಪ್ರಕರಣಗಳಲ್ಲೂ ಏರಿಕೆ ಕಂಡಿದೆ. 

ಶ್ರೀನಗರ: ಅಫ್ಘಾನಿಸ್ತಾನದಲ್ಲಿ ತಾಲೀಬಾನ್ ಆಡಳಿತ ಜಾರಿಗೆ ಬಂದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ, ಜನತೆಯ ಹತ್ಯೆಯ ಪ್ರಕರಣಗಳಲ್ಲೂ ಏರಿಕೆ ಕಂಡಿದೆ. 

ಆಗಸ್ಟ್ ಮಧ್ಯದಲ್ಲಿ ಅಫ್ಘಾನಿಸ್ತಾನ ತಾಲೀಬಾನ್ ವಶವಾಗಿತ್ತು. ಅಂಕಿ-ಅಂಶಗಳ ಪ್ರಕಾರ ಆ.15 ರಿಂದ ಅಕ್ಟೋಬರ್ ಮಾಸಾಂತ್ಯದ ವರೆಗೂ ಜಮ್ಮು-ಕಾಶ್ಮೀರದಲ್ಲಿ 16 ಭದ್ರತಾ ಸಿಬ್ಬಂದಿಗಳು, 15 ಪ್ರಜೆಗಳು ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. 

ಇದೇ ಅವಧಿಯಲ್ಲಿ 39 ಉಗ್ರರನ್ನೂ, ಉಗ್ರ ಸಂಘಟನೆಗಳ ಕಮಾಂಡರ್ ಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ 12 ಭದ್ರತಾ ಸಿಬ್ಬಂದಿಗಳು, 20 ಉಗ್ರರು ಹಾಗೂ 12 ನಾಗರಿಕರು ಹತ್ಯೆಗೀಡಾಗಿದ್ದಾರೆ. ಸೆಪ್ಟೆಂಬರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು 8 ಮಂದಿ ಉಗ್ರರು, ಓರ್ವ ನಾಗರಿಕ ಜೀವ ಕಳೆದುಕೊಂಡಿದ್ದರು.

"ಆ.15 ರಿಂದ ಆ.31 ರ ಅವಧಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದರೆ, 11 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು" ಎಂಬುದನ್ನು ಅಂಕಿ-ಅಂಶಗಳು ಬಹಿರಂಗಪಡಿಸುತ್ತಿದೆ.

ಆ.14 ರಂದು ತಾಲೀಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದರು. ಇದು ಉಗ್ರರಿಗೆ ಉತ್ತೇಜನ ನೀಡುವ ಬೆಳವಣಿಗೆಯಾಗಿ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಹೆಚ್ಚಾಗಲಿವೆ ಎಂಬ ಎಚ್ಚರಿಕೆಯನ್ನು ಭದ್ರತಾ ತಜ್ಞರು ನೀಡಿದ್ದರು. ಕಳೆದ 2 ತಿಂಗಳ ಅಂಕಿ-ಅಂಶಗಳ ಪ್ರಕಾರ ಭದ್ರತಾ ಪಡೆಗಳು, ನಾಗರಿಕರ ಜೀವ ಹಾನಿ ಹೆಚ್ಚಾಗಿದ್ದರೆ, ಉಗ್ರರ ಸಾವುಗಳ ಸಂಖ್ಯೆ ಕಡಿಮೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT