ಎಂಟು ನಕ್ಸಲರ ಬಂಧನ 
ದೇಶ

ಛತ್ತೀಸ್‌ಗಢದ ಸುಕ್ಮಾದಲ್ಲಿ ಎಂಟು ನಕ್ಸಲರ ಬಂಧನ

ದಕ್ಷಿಣ ಛತ್ತೀಸ್‌ಗಢದ ಕಲಹ ಪೀಡಿತ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ.

ರಾಯ್‌ಪುರ: ದಕ್ಷಿಣ ಛತ್ತೀಸ್‌ಗಢದ ಕಲಹ ಪೀಡಿತ ಸುಕ್ಮಾ ಜಿಲ್ಲೆಯ ಮೋರೆಪಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಎಂಟು ಶಂಕಿತ ಮಾವೋವಾದಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಆರು ಮಂದಿಯ ತಲೆಗೆ ಬಹುಮಾನ ಬಹುಮಾನ ಘೋಷಿಸಲಾಗಿತ್ತು.

ಬಂಧಿತ ನಕ್ಸಲರಿಂದ ನಾಲ್ಕು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿಗಳು), ಡಿಟೋನೇಟರ್‌ಗಳು, ಬ್ಯಾಟರಿಗಳು, ಕೆಲವು ಶಸ್ತ್ರಾಸ್ತ್ರಗಳು, ಮಾವೋವಾದಿ ಸಾಹಿತ್ಯ ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

ಈ ಪ್ರದೇಶದಲ್ಲಿ ನಕ್ಸಲರ ಚಲನವಲನದ ಕುರಿತಂತೆ ನಮಗೆ ಗುಪ್ತಚರ ದಳ ಮಾಹಿತಿ ನೀಡಿತ್ತು. ಹೀಗಾಗಿ ನವೆಂಬರ್ 2ರಿಂದ ರಕ್ಷಣಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಇದೀಗ ಒಟ್ಟು 8 ಮಂದಿಯನ್ನ ಬಂಧಿಸಲಾಗಿದೆ ಎಂದು ಸುಕ್ಮಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಅವರು ಹೇಳಿದ್ದಾರೆ.

ಬಂಧಿತರಲ್ಲಿ ‘ಕವಾಸಿ ರಾಜು ಅಲಿಯಾಸ್ ಸಂತು’ ಬೆಟಾಲಿಯನ್ ಸದಸ್ಯನಾಗಿದ್ದು ಮತ್ತು ‘ಕಲ್ಮು ಮಾಡಾ’ ಮಿಲಿಷಿಯಾ ಕಂಪನಿ ಕಮಾಂಡರ್ ಆಗಿದ್ದಾನೆ. ಇವರಿಬ್ಬರ ತಲೆಗೆ ಕ್ರಮವಾಗಿ 8 ಮತ್ತು 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಇತರೆ ಆರೋಪಿಗಳ ಸುಳಿವು ನೀಡಿದ್ದವರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಬಂಧಿಸಲಾದ ಎಲ್ಲಾ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು 35 ಡಿಟೋನೇಟರ್‌ಗಳು, 6 ಜಿಲೆಟಿನ್ ರಾಡ್‌ಗಳು, ಎರಡು ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಬ್ಯಾಟರಿಗಳು, ವೈರ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ; ರಾಜ್ಯಪಾಲ ಗೆಹ್ಲೋಟ್ ಇಂದೇ ಬೆಂಗಳೂರಿಗೆ ವಾಪಸ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT