ಕೇದಾರನಾಥದಲ್ಲಿ ಪ್ರಧಾನಿ ಮೋದಿ 
ದೇಶ

ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ

ಒಂದು ವೇಳೆ ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶಾದ್ಯಂತ ಅವರನ್ನು ದೇಶದ್ರೋಹಿ ಎಂಬಂತೆ ಪ್ರತಿಬಿಂಬಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಟೀಕಿಸಿದ್ದಾರೆ.

ನವದೆಹಲಿ: ಶುಕ್ರವಾರ ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ  ಪ್ರತಿಮೆಯನ್ನು ಉದ್ಘಾಟಿಸಿದ್ದರು.

ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋ ಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಎಲ್ಲಕ್ಕಿಂತ ಅಚ್ಚರಿ ಎಂದರೆ ಸೋಷಿಯಲ್ ಮೀಡಿಯಾ ಬಳಕೆದಾರರು ಮೋದಿ ಕೇದಾರನಾಥ ಭೇಟಿ ಸಂದರ್ಭದ ವಿಡಿಯೋಗಳಲ್ಲಿ ಮೋದಿ ಶೂ ಧರಿಸಿರುವುದನ್ನು ಪತ್ತೆ ಹಚ್ಚಿದ್ದು, ಮೋದಿ ನಡೆ ವಿವಾದಕ್ಕೆ ಕಾರಣವಾಗಿದೆ. 

ಒಂದು ವೇಳೆ ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶಾದ್ಯಂತ ಅವರನ್ನು ದೇಶದ್ರೋಹಿ ಎಂಬಂತೆ ಪ್ರತಿಬಿಂಬಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಟೀಕಿಸಿದ್ದಾರೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮೋದಿ ದೇವಾಲಯ ಆವರಣದಲ್ಲಿ ಶೂ ಧರಿಸಿ ನಡೆಯುತ್ತಿರುವ ವಿಡಿಯೊ ಹಂಚಿಕೊಂಡು, ಮೋದಿ ದೇವಾಲಯದಲ್ಲಿ ಶೂ ಧರಿಸಿ ನಮಸ್ಕರಿಸುತ್ತಿದ್ದಾರೆ ಎಂದರೆ ಅದೂ ಸಂಪ್ರದಾಯವಾಗಿರಬಹುದು ಎಂದು ಟ್ವೀಟ್ ಮಾಡಿದ್ದಾರೆ. 

ಇದೇ ವೇಳೆ ನರೇಂದ್ರ ಮೋದಿ ಧರಿಸಿರುವುದು ಶೂ ಅಲ್ಲ, ಬಟ್ಟೆಯ ಕವಚ. ಅಲ್ಲಿನ ಚಳಿಯಲ್ಲಿ ಭಕ್ತಾದಿಗಳು ವುಲನ್ ಸಾಕ್ಸ್ ಧರಿಸುವುದು ಸಾಮಾನ್ಯ ಎಂದು ಮೋದಿ ಅಭಿಮಾನಿಗಳು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈಗಷ್ಟೆ ಚಳಿಗಾಲದ ಕಾರಣದಿಂದ ಕೇದಾರನಾಥ ಪ್ರವೇಶ ನಿರ್ಬಂಧಿಸಲು ದೇವಾಲಯದ ವೆಬ್ ಸೈಟಲ್ಲಿ ಬುಕಿಂಗ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ.  

Related Article

ಕೋವಿಡ್ ಚಿಕಿತ್ಸೆಗೆ ಮಾತ್ರೆ ಔಷಧಿ ಅನುಮೋದಿಸಿದ ಮೊದಲ ದೇಶ ಬ್ರಿಟನ್

COP-26 ಸಮ್ಮೇಳನ: 'ಒಬ್ಬನೇ ಸೂರ್ಯ, ಒಂದು ಜಗತ್ತು, ಒಂದು ಗ್ರಿಡ್‌' ಗೆ ಪ್ರಧಾನಿ ಮೋದಿ ಕರೆ

ಸುಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ: ಪ್ರಧಾನಿ ಮೋದಿ

2013ರ ಪ್ರಧಾನಿ ಮೋದಿ ಪಾಟ್ನಾ ರ್ಯಾಲಿ ವೇಳೆ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

66ನೇ ಕನ್ನಡ ರಾಜ್ಯೋತ್ಸವ: ಪ್ರಧಾನಿ ಮೋದಿಯಿಂದ ಕನ್ನಡದಲ್ಲಿ ಶುಭಾಶಯ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಶ್ರದ್ಧಾಂಜಲಿ ಅರ್ಪಿಸಿದ ಮೋದಿ

ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆಗಳನ್ನು ತಯಾರಿಸಲು ಭಾರತ ಸಿದ್ಧವಾಗಿದೆ: ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ವಿಧಿಯ ಕ್ರೂರತೆ ಪುನೀತ್ ರಾಜ್‌ಕುಮಾರ್ ಎಂಬ ಪ್ರತಿಭಾವಂತ ನಟನನ್ನು ನಮ್ಮಿಂದ ಕಿತ್ತುಕೊಂಡಿದೆ: ಪ್ರಧಾನಿ ಮೋದಿ ಸಂತಾಪ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT