ಚೆನ್ನೈ ನಲ್ಲಿ ಜಲಾವೃತಗೊಂಡಿರುವ ರಸ್ತೆಗಳು 
ದೇಶ

ಚೆನ್ನೈ ನಲ್ಲಿ ಭಾರಿ ಮಳೆ: ರಕ್ಷಣೆ, ಪರಿಹಾರ ಕಾರ್ಯಾಚರಣೆಗಳಿಗೆ ಕೇಂದ್ರದಿಂದ ಅಗತ್ಯ ನೆರವು ಘೋಷಿಸಿದ ಪ್ರಧಾನಿ

ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ.

ಚೆನ್ನೈ: ಹಲವು ವರ್ಷಗಳ ಬಳಿಕ ಸುರಿದ ಭಾರಿ ಮಳೆಯ ಪರಿಣಾಮ ತಮಿಳುನಾಡು ರಾಜ್ಯದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. 

24 ಗಂಟೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಿದ್ದು, ಮೂರು ನಗರಗಳ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.

ಈಶಾನ್ಯ ಮುಂಗಾರು ಪ್ರಾರಂಭವಾದಾಗಿನಿಂದಲೂ, ಅಕ್ಟೋಬರ್ ತಿಂಗಳಲ್ಲಿ ತಮಿಳುನಾಡು, ಪುದುಚೆರಿಗಳ ಭಾಗದಲ್ಲಿ ಎಂದಿಗಿಂತಲೂ ಶೇ.43 ರಷ್ಟು ಹೆಚ್ಚು ಮಳೆಯಾಗಿದೆ.

6 ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಈ ಪ್ರಮಾಣದಲ್ಲಿ ಮಳೆಯಾಗಿದೆ. ಹಲವೆಡೆ ನಗರಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ತಮಿಳುನಾಡಿಗೆ ಪರಿಸ್ಥಿತಿ ನಿಭಾಯಿಸುವುದಕ್ಕಾಗಿ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. 

"ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್ ಅವರೊಂದಿಗೆ ಮಾತನಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಉಂಟಾಗಿರುವ ಪರಿಣಾಮಗಳ ಬಗ್ಗೆ ಚರ್ಚಿಸಲಾಯಿತು. ರಕ್ಷಣಾ ಕಾರ್ಯಾಚರಣೆ ಹಾಗೂ ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ತಮಿಳುನಾಡಿಗೆ ಅಗತ್ಯ ಭರವಸೆ ನೀಡಲಾಗುವುದು" ಎಂದು ಮೋದಿ ಭರವಸೆ ನೀಡಿದ್ದಾರೆ.

ಇದೇ ವೇಳೆ ತಮಿಳುನಾಡು ಸಿಎಂ ಜಲಾವೃತಗೊಂಡಿರುವ ಪ್ರದೇಶಗಳನ್ನು ಹಿರಿಯ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ನೀರನ್ನು ಹೊರಹಾಕುವುದಕ್ಕೆ ಕ್ಷಿಪ್ರಗತಿಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT