ಅಪೌಷ್ಟಿಕತೆ (ಸಾಂಕೇತಿಕ ಚಿತ್ರ) 
ದೇಶ

ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ: ವರದಿ

ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ನವದೆಹಲಿ: ಭಾರತದಲ್ಲಿ 33 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 

ಮಹಾರಾಷ್ಟ್ರ, ಬಿಹಾರ ಮತ್ತು ಗುಜರಾತ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಆರ್ ಟಿಐ ಅರ್ಜಿಗೆ ಪ್ರತಿಕ್ರಿಯಿಸಿದೆ.

ಕೋವಿಡ್ ಸಾಂಕ್ರಾಮಿಕದಿಂದ ಬಡ ಮಕ್ಕಳಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆ ಮತ್ತು ಅಪೌಷ್ಟಿಕತೆ ಹೆಚ್ಚಲು ಕಾರಣವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಹೇಳಿದೆ. 17,76,902 (17.76 ಲಕ್ಷ/1.7 ಮಿಲಿಯನ್) ಮಕ್ಕಳು ಹೆಚ್ಚು ಅಪೌಷ್ಟಿಕತೆಯಿಂದ (SAM-severely acute malnourished children) ಬಳಲುತ್ತಿವೆ. 15, 46,420 (15.46 ಲಕ್ಷ/1.5 ಮಿಲಿಯನ್) ಮಕ್ಕಳು ಮಧ್ಯಮ ಅಪೌಷ್ಟಿಕತೆಯಿಂದ (MAM-moderately acute malnourished ) ಬಳಲುತ್ತಿವೆ. 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 33,23,322 (33.23 ಲಕ್ಷ/3.3 ಮಿಲಿಯನ್) ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿವೆ ಎಂದು ಆರ್​ಟಿಐ ಪ್ರಶ್ನೆಗೆ  ಸಚಿವಾಲಯ ಉತ್ತರ ನೀಡಿದೆ. ಕಳೆದ ವರ್ಷ ಅಭಿವೃದ್ಧಿಪಡಿಸಲಾದ ಪೋಶನ್ ಟ್ರ್ಯಾಕರ್ ಅಪ್ಲಿಕೇಶನ್ ನಲ್ಲಿ ಸಂಖ್ಯೆಗಳನ್ನು ನೋಂದಾಯಿಸಲಾಗಿದೆ.

ನವೆಂಬರ್ 2020 ಮತ್ತು ಅಕ್ಟೋಬರ್ 14, 2021 ರ ನಡುವೆ SAM ಮಕ್ಕಳ ಸಂಖ್ಯೆಯಲ್ಲಿ 91 ಪ್ರತಿಶತದಷ್ಟು ಏರಿಕೆ ಕಂಡುಬಂದಿದೆ. ಅಂದರೆ  9,27,606 (9.27 ಲಕ್ಷ) ದಿಂದ ಈಗ 17.76 ಲಕ್ಷಕ್ಕೆ ಏರಿಕೆಯಾಗಿದೆ. ಆದರೆ ಈ ಎರಡು ಅಂಕಿಅಂಶಗಳ ಡೇಟಾ ಸಂಗ್ರಹಣೆಯ ವಿಧಾನ ವಿಭಿನ್ನವಾಗಿದೆ. 

ಕಳೆದ ವರ್ಷ ಗುರುತಿಸಲಾದ SAM ಮಕ್ಕಳ ಸಂಖ್ಯೆಯನ್ನು ಆರು ತಿಂಗಳಿಂದ ಹಿಡಿದು ಆರು ವರ್ಷಗಳವರೆಗಿನ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿತ್ತು. ಇತ್ತೀಚಿನ ಅಂಕಿಅಂಶಗಳು ಪೋಶನ್ ಟ್ರ್ಯಾಕರ್ ಮೂಲಕ, ಅಲ್ಲಿ ಅಂಗನವಾಡಿಗಳಿಂದ ನೇರವಾಗಿ ಸಂಖ್ಯೆಗಳನ್ನು ನಮೂದಿಸಲಾಗಿದೆ ಮತ್ತು ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

ದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ

ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಖರೀದಿ ಮಾಡಲ್ಲ, ಬಾಡಿಗೆ ಪಡೆಯಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

SCROLL FOR NEXT